
ರಾಮನಗರ(ಜ.14): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ, ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಮನಗರ ನಗರದ ಕುಮಾರಸ್ವಾಮಿ ಲೇಔಟ್ನಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ತಾಯಿ ವಿಜಯಲಕ್ಷ್ಮಿ (50), ಮಗ ಹರ್ಷ(25) ಎಂಬುವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ರಾತ್ರಿ ಊಟ ಮಾಡುವ ವಿಚಾರವಾಗಿ ತಾಯಿ ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಮನನೊಂದ ತಾಯಿ ವಿಜಯಲಕ್ಷ್ಮೀ ಮನೆಯ ಬಳಿಯ ಸಂಪಿಗೆ ಬಿದ್ದಿದ್ದಳು. ಆಸ್ಪತ್ರೆಗೆ ಸೇರಿಸುವಾಗ ತಾಯಿ ವಿಜಯಲಕ್ಷ್ಮೀ ಮೃತಪಟ್ಟಿದ್ದರು.
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಅರೆಸ್ಟ್
ಈ ವಿಚಾರ ತಿಳಿದು ತೀವ್ರವಾಗಿ ಮನನೊಂದ ಹರ್ಷ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತ ತಿಳಿದು ಬಂದಿದೆ. ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ