ಬೆಂಗಳೂರು: ಮಗಳನ್ನು ಭೀಕರವಾಗಿ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Published : Mar 21, 2024, 07:46 AM IST
ಬೆಂಗಳೂರು: ಮಗಳನ್ನು ಭೀಕರವಾಗಿ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

ಸಾರಾಂಶ

ಸೀಗೇಹಳ್ಳಿ ನಿವಾಸಿ ಲಕ್ಷ್ಮೀನಾರಾಯಣ್ ದಂಪತಿ ಪುತ್ರಿ ಶೃತಿಕಾ ಕೊಲೆಯಾದ ದುರ್ದೈವಿ. ಆತ್ಮಹತ್ಯೆಗೆ ಯತ್ನಿ ಸಿದ ಮೃತಳ ತಾಯಿ ಚಿನ್ನಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೂರು ದಿನಗಳ ಹಿಂದೆ ಸೀಗೇಹಳ್ಳಿಯ ಮನೆಯಲ್ಲಿ ಮಗಳ ಕೊಂದು ನಂತರ ಕತ್ತು ಸೀಳಿಕೊಂಡು ಆಕೆ ಆತ್ಮಹತ್ಯೆ ಯತ್ನಿಸಿದ್ದಳು. 

ಬೆಂಗಳೂರು(ಮಾ.21): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸರಗೊಂಡು ತನ್ನ ಎರಡು ವರ್ಷದ ಮಗಳನ್ನು ಭೀಕರವಾಗಿ ಕೊಂದು ಬಳಿಕ ತಾಯಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ದಾರುಣ ಘಟನೆ ಕೆ.ಆ‌ರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೀಗೇಹಳ್ಳಿ ನಿವಾಸಿ ಲಕ್ಷ್ಮೀನಾರಾಯಣ್ ದಂಪತಿ ಪುತ್ರಿ ಶೃತಿಕಾ (2) ಕೊಲೆಯಾದ ದುರ್ದೈವಿ. ಆತ್ಮಹತ್ಯೆಗೆ ಯತ್ನಿ ಸಿದ ಮೃತಳ ತಾಯಿ ಚಿನ್ನಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೂರು ದಿನಗಳ ಹಿಂದೆ ಸೀಗೇಹಳ್ಳಿಯ ಮನೆಯಲ್ಲಿ ಮಗಳ ಕೊಂದು ನಂತರ ಕತ್ತು ಸೀಳಿಕೊಂಡು ಆಕೆ ಆತ್ಮಹತ್ಯೆ ಯತ್ನಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಸರ್ಕಾರಿ ನೌಕರ ಗಂಡನ IPL ಬೆಟ್ಟಿಂಗ್‌ ದಂಧೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ರಂಜಿತಾ!

ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಮೂಲದ ಲಕ್ಷ್ಮೀ ನಾರಾಯಣ್, ಮೂರು ತಿಂಗಳ ಹಿಂದಷ್ಟೇ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದಿದ್ದರು. ಬಳಿಕ ಸಾಫ್ಟ್‌ವೇ‌ರ್ ಕಂಪನಿಯಲ್ಲಿ ನೌಕರಿ ಪಡೆದ ಆತ, ಸೀಗೇಹಳ್ಳಿಯಲ್ಲಿ ತನ್ನ ಪತ್ನಿ ಹಾಗೂ ಮಗಳ ಜತೆ ವಾಸವಾಗಿದ್ದರು. ಇತ್ತೀಚಿಗೆ ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪ ವಾಗಿತ್ತು. ಅಲ್ಲದೆ ಅನಾರೋಗ್ಯಕ್ಕೆ ಅವರ ಪತ್ನಿ ಚಿನ್ನಾ ತುತ್ತಾಗಿದ್ದಳು. ಈ ಎರಡು ಕಾರಣಗಳಿಂದ ಖಿನ್ನತೆಗೆ ಒಳಗಾದ ಆಕೆ, ತನ್ನ ಮಗಳ ಕೊಂದು ಆತ್ಮಹತ್ಯೆ ಯೋಜಿಸಿದ್ದಳು. ಅಂತೆಯೇ ಭಾನುವಾರ ಸಂಜೆ ಪತಿ ಮನೆಯಿಂದಹೊರಹೋದಾಗಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ಚಾಕುವಿನಿಂದ ತನ್ನ ಕುತ್ತಿಗೆ ಸೀಳಿಕೊಂಡು ಆಕೆ ಆತ್ಮಹತ್ಯೆ ಯತ್ನಿಸಿದ್ದಾಳೆ. ಆಗ ಚೀರಾಟ ಕೇಳಿ ಪಕ್ಕದ ಮನೆಯವರು ಮನೆ ಬಂದಾಗ ರಕ್ತದ ಮಡುವಿಲ್ಲಿ ಚಿನ್ನಾ ಪತ್ತೆಯಾಗಿದ್ದಾಳೆ.ಕೂಡಲೇ ಆಕೆಯನ್ನು ರಕ್ಷಿಸಿಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತುರ್ತು ಚಿಕಿತ್ಸಾ ಘಟಕದಲ್ಲಿ ಆಕೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!