
ಬಸವನಬಾಗೇವಾಡಿ(ಡಿ.14): ತಾಲೂಕಿನ ಉಕ್ಕಲಿ ಗ್ರಾಮದ ಮಹಿಳೆಯೊಬ್ಬಳು ಕೌಟುಂಬಿಕ ಕಲಹದಿಂದ ನೊಂದು ತನ್ನ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಗ್ರಾಮದ ರೇಣುಕಾ ಅಮೀನಪ್ಪ ಕೋನಿನ(26) ಎಂಬ ಮಹಿಳೆಯು ತನ್ನ ಇಬ್ಬರು ಮಕ್ಕಳಾದ ಯಲ್ಲವ್ವ (2), ಅಮೃತಾ (1) ಅವರೊಂದಿಗೆ ಗ್ರಾಮದ ಹೊರವಲಯದಲ್ಲಿರುವ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಎರಡು ದಿನಗಳ ಹಿಂದೆ ಹಾರಿದ್ದು, ಮಂಗಳವಾರ ತಾಯಿ ಮತ್ತು ಒಂದು ಹೆಣ್ಣು ಮಗುವಿನ ಶವ ಸಿಕ್ಕಿದೆ.
ರೇಣುಕಾ ಅವರು ಎರಡು ದಿನಗಳ ಹಿಂದೆ ಗಂಡನ ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದರು. ಜೊತೆಗೆ ತನ್ನ ಪುಟ್ಟಇಬ್ಬರು ಹೆಣ್ಣಮಕ್ಕಳನ್ನು ಕರೆದುಕೊಂಡು ಹೋಗಿದ್ದರು. ಎರಡು ದಿನಗಳ ಕಾಲ ಗಂಡನ ಮನೆಯವರು ರೇಣುಕಾ ಇಬ್ಬರು ಮಕ್ಕಳನ್ನು ಹುಡುಕಾಡಿದ ನಂತರ ಗಂಡನ ಮನೆಯವರು ಕಾಣೆಯಾಗಿದ್ದರ ಕುರಿತು ಸೋಮವಾರ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ
ಮಂಗಳವಾರ ಉಕ್ಕಲಿ ಗ್ರಾಮದ ಕಾಲುವೆಯಲ್ಲಿ ರೇಣುಕಾ ಹಾಗೂ ಒಂದು ಹೆಣ್ಣಮಗುವಿನ ಶವ ಪತ್ತೆಯಾಗಿದೆ. ಮತ್ತೊಬ್ಬ ಹೆಣ್ಣುಮಗುವಿನ ಶವ ಪತ್ತೆಗಾಗಿ ಸ್ಥಳೀಯರು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಮನಗೂಳಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ