
ಚಿಕ್ಕಬಳ್ಳಾಪುರ(ಜು.23): ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರಲ್ಲಿ ಒಬ್ಬ ಮಗಳು ಈಜಿ ದಡ ಸೇರಿ ಬದುಕುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ದಿನ್ನೆಯ ಜಡಿಗೆನಹಳ್ಳಿಯಲ್ಲಿ ನಡೆದಿದೆ.
ನಾಗಮ್ಮ (39) ಮತ್ತು 5 ವರ್ಷದ ಬಾಲಕಿ ಶ್ರೀನಿಧಿ ನೀರಿನಲ್ಲಿ ಮುಳುಗಿ ಮೃತಪಟ್ಟರೆ, ಮತ್ತೊಬ್ಬ ಪುತ್ರಿ ಏಳು ವರ್ಷದ ಬಾಲಕಿ ಗಂಗೋತ್ರಿ ಈಜಿ ದಡ ಸೇರಿ ಬದುಕುಳಿದಿದ್ದಾಳೆ.
ಮಂಡ್ಯ: ಅನಾರೋಗ್ಯದಿಂದ ಬೇಸತ್ತು ವಿಧವೆ ನೇಣು ಬಿಗಿದು ಆತ್ಮಹತ್ಯೆ
ಮನೆಯಲ್ಲಿ ಪತಿ, ಪತ್ನಿ ನಡುವೆ ನಿತ್ಯ ಜಗಳ ಆಗುತ್ತಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತ ನಾಗಮ್ಮ ಶುಕ್ರವಾರ ರಾತ್ರಿ ತನ್ನ ಇಬ್ಬರು ಮಕ್ಕಳೊಂದಿಗೆ ಜಡಿಗೆನಹಳ್ಳಿ ಹೊರವಲಯದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ