ಚಿಂತಾಮಣಿ: ಹೆಣ್ಣು ಎಂಬ ಕಾರಣಕ್ಕೆ ಹಸುಗೂಸಿಗೇ ನೇಣು ಬಿಗಿದು ಕೊಂದ ಪಾಪಿ ತಾಯಿ..!

Suvarna News   | Asianet News
Published : Jul 03, 2021, 01:08 PM ISTUpdated : Jul 03, 2021, 01:14 PM IST
ಚಿಂತಾಮಣಿ: ಹೆಣ್ಣು ಎಂಬ ಕಾರಣಕ್ಕೆ ಹಸುಗೂಸಿಗೇ ನೇಣು ಬಿಗಿದು ಕೊಂದ ಪಾಪಿ ತಾಯಿ..!

ಸಾರಾಂಶ

* ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ನಡೆದ ಘಟನೆ * ಮಗು ಕೊಂದ ಬಳಿಕ ತಾಯಿ ನಾಪತ್ತೆ * ಆರೋಪಿ ತಾಯಿಯ ಪತ್ತೆಗೆ ಬಲೆ ಬೀಸಿದ ಪೊಲೀಸರು

ಚಿಕ್ಕಬಳ್ಳಾಪುರ(ಜು.03): ಹೆಣ್ಣು ಮಗು ಎಂಬ ಕಾರಣಕ್ಕೆ ತಾಯಿಯೇ ಹಸುಗೂಸಿಗೆ ನೇಣು ಬಿಗಿದು ಕೊಂದ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು(ಶನಿವಾರ) ನಡೆದಿದೆ.  

ಹೆಣ್ಣು ಮಗು ಎಂಬ ಕಾರಣಕ್ಕೆ ಆಗತಾನೆ ಹುಟ್ಟಿದ ಹಸುಳೆಯನ್ನೇ ನೇಣು ಬಿಗಿದು ಕೊಂದಿದ್ದಾಳೆ ಮಹಾತಾಯಿ ಎಂದು ತಿಳಿದು ಬಂದಿದೆ. ಮಗು ಕೊಂದ ಮೇಲೆ ಆಸ್ಪತ್ರೆಯಿಂದ ತಾಯಿ ನಾಪತ್ತೆಯಾಗಿದ್ದಾಳೆ. ತಾಯಿ ಪತ್ತೆಗಾಗಿ ಆಸ್ಪತ್ರೆಯ ಸಿಬ್ಬಂದಿ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.  

ಹುಬ್ಬಳ್ಳಿ: ಒಂಟಿ ಕಾಲಿನೊಂದಿಗೆ ಜನಿಸಿದ ಶಿಶು ಸಾವು

ಬೆಳ್ಳಂ ಬೆಳಗ್ಗೆ ಎಂದಿನಂತೆ ಶೌಚಾಲಯ ಸ್ವಚ್ಛತೆಗೆ ಬಂದ ಸಿಬ್ಬಂದಿಗೆ ಶೌಚಾಲಯದ ಕಿಟಕಿಗೆ ಟೈನ್ ದಾರದಲ್ಲಿ ಮಗುವಿನ ಕುತ್ತಿಗೆಗೆ ಕಟ್ಟಿ ಎಸೆದಿರುವುದು ಕಂಡು ಬಂದಿದೆ. 

ಈ ಘಟನೆಯ ಕುರಿತು ವೈದ್ಯರಿಗೆ ಮಾಹಿತಿ ನೀಡಿದ ನಂತರ ಚಿಕಿತ್ಸೆ ನೀಡಲು ಮುಂದಾದರಾದರೂ, ಆ ವೇಳೆಯೊಳಗೆ ಮಗು ಮೃತಪಟ್ಟಿತ್ತು. ಈ ಕುರಿತು ಚಿಂತಾಮಣಿ ನಗರಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು ಆರೋಪಿ ತಾಯಿಯ ಪತ್ತೆಗೆ ಬಲೆ ಬೀಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಕಲಿ ಕ್ಯೂಆರ್​ ಕೋಡ್​ಗೆ ಬಲಿಯಾಗದಿರಿ ಎಚ್ಚರ! ಯಾಮಾರಿದ್ರೆ ಅಕೌಂಟ್​ ಖಾಲಿ: ನಕಲಿ ಗುರುತಿಸುವುದು ಹೇಗೆ?
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು