ಸಾಲಭಾದೆ: ತಾಯಿ, ಮಗ ನೇಣಿಗೆ ಶರಣು

Published : Oct 07, 2020, 10:12 AM IST
ಸಾಲಭಾದೆ: ತಾಯಿ, ಮಗ ನೇಣಿಗೆ ಶರಣು

ಸಾರಾಂಶ

ತಾಯಿ-ಮಗ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ| ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದ ಘಟನೆ| ಸಾಲಭಾದೆಯಿಂದ ತಾಯಿ-ಮಗ ಆತ್ಮಹತ್ಯೆ ಶಂಕೆ| ತನಿಖೆ ಆರಂಭಿಸಿದ ಪೊಲೀಸರು|   

ಬೆಂಗಳೂರು(ಅ.07): ತಾಯಿ ಮತ್ತು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕೊಡಿಗೇಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಟರಾಯನಪುರ ನಿವಾಸಿ ಸುಮಿತ್ರಮ್ಮ (55) ಮತ್ತು ಶಿವರಾಜ್‌ (25) ಮೃತರು. ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಕೆಲ ವರ್ಷಗಳಿಂದ ತಾಯಿ ಮತ್ತು ಮಗ ಬ್ಯಾಟರಾಯನಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳವಾರ ಸಂಜೆಯಿಂದ ಸುಮಿತ್ರ ಅವರಿಗೆ ಪುತ್ರಿ ಹಲವು ಬಾರಿ ಕರೆ ಮಾಡಿದ್ದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು ತಾಯಿ ಮನೆಗೆ ಬಂದು ನೋಡಿದಾಗ, ಒಳಗಿನಿಂದಲೇ ಬಾಗಿಲು ಲಾಕ್‌ ಮಾಡಲಾಗಿತ್ತು. ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿ ಮತ್ತು ಸಹೋದರ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಮೈಸೂರು; ಸಾಯುತ್ತೇನೆ ಎಂದು ಹೇಳ್ತಾ ಕೊನೆಗೂ ಎಣ್ಣೆ ಏಟಲ್ಲಿ ನೇಣು ಹಾಕ್ಕೊಂಡ!

ಈ ಕುರಿತು ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಕುಟುಂಬಸ್ಥರಿಂದ ಹೇಳಿಕೆ ಪಡೆದು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಮನೆಯಲ್ಲಿ ಯಾವುದೇ ರೀತಿಯ ಡೆತ್‌ನೋಟ್‌ ಪತ್ತೆಯಾಗಿಲ್ಲ. ಸಾಲಭಾದೆಯಿಂದ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಕ್ಕೆ ಕಂಡು ಬಂದಿದೆ.

ಈ ಬಗ್ಗೆ ಸುಮಿತ್ರಮ್ಮ ಅವರ ಪುತ್ರಿ ಕೂಡ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಊರಿನಲ್ಲಿ ಜಮೀನು ವ್ಯಾಜ್ಯ ಕೂಡ ಆಗಿತ್ತು ಎಂಬುದು ಗೊತ್ತಾಗಿದೆ. ಈ ಎಲ್ಲಾ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ಎಲ್ಲಾ ಆಯಮಾಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಆಷಾಢ ಮುಗಿದ್ರೂ ತವರಿನಿಂದ ಬರಲಿಲ್ಲ ಪತ್ನಿ; ಪ್ರಾಣ ಕಳೆದುಕೊಂಡ ನವವಿವಾಹಿತ ಅವಿನಾಶ್