ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಗಳ ಶವದ ಜತೆ 4 ದಿನ ಕಳೆದ ತಾಯಿ..!

Published : May 31, 2022, 08:51 AM ISTUpdated : May 31, 2022, 09:08 AM IST
ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಗಳ ಶವದ ಜತೆ 4 ದಿನ ಕಳೆದ ತಾಯಿ..!

ಸಾರಾಂಶ

*   ಮಂಡ್ಯ ನಗರದ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ನಡೆದ ಘಟನೆ  *  ಶವದ ದುರ್ವಾಸನೆಗೆ ಸ್ಥಳೀಯರ ಆತಂಕ  * ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ   

ಮಂಡ್ಯ(ಮೇ.31): ನಾಲ್ಕು ದಿನಗಳಿಂದ ಮಗಳ ಮೃತದೇಹದ ಜೊತೆ ತಾಯಿ ವಾಸವಿದ್ದ ಭಯಾನಕ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ನಿನ್ನೆ(ಸೋಮವಾರ) ಬೆಳಕಿಗೆ ಬಂದಿದೆ. 30 ವರ್ಷದ ರೂಪ ಎಂಬುವರು ಮೃತಪಟ್ಟಿದ್ದು, ಮಗಳ ಸಾವಿನ ವಿಚಾರ ಯಾರಿಗೂ ತಿಳಿಸದ ತಾಯಿ ನಾಗಮ್ಮ ಶವದ ಜೊತೆಯೇ ನಾಲ್ಕು ದಿನ ಕಳೆದಿದ್ದಾರೆ.

ಮನೆಯಿಂದ ಯಾರು ಹೊರಬರದಿದ್ದಾಗ ಕಾಡಿದ್ದ ಅನುಮಾನ

ನಾಲ್ಕು ದಿನಗಳ ಹಿಂದಯೇ ರೂಪ ಮೃತಪಟ್ಟಿದ್ದಾರೆ. ತಾಯಿ ನಾಗಮ್ಮ ಮಾತ್ರ ಮಗಳ ಸಾವಿನ ವಿಚಾರ ಯಾರಿಗೂ ತಿಳಿಸಿರಲಿಲ್ಲ. ಮನೆಯ ಬಾಗಿಲು ಹಾಕಿಕೊಂಡು ಮನೆ ಒಳಗೆ ಇದ್ದರಂತೆ. ಆದ್ರೆ 4 ದಿನಗಳಿಂದ ಮನೆಯಲ್ಲೇ ಇದ್ದ ಮೃತದೇಹ ಕೊಳೆತು ದುರ್ವಾಸನೆ ಬರಲು ಆರಂಭಿಸಿದೆ. ಆರಂಭದಲ್ಲಿ ಇಲಿ, ಹೆಗ್ಗಣ ಸತ್ತಿರಬಹುದು ಎಂದುಕೊಂಡು ಹುಡುಕಾಡಿದ್ದ ಅಕ್ಕಪಕ್ಕದವರು ಯಾವಾಗ ನಾಗಮ್ಮ ಮತ್ತು ರೂಪ ಮನೆಯಿಂದ ಹೊರಬರದೆ ಇದ್ದರೂ ಆಗ ಅನುಮಾನಗೊಂಡಿದ್ರು. ಬಳಿಕ ಮಿಕ್ಸಿ ರಿಪೇರಿಗೆಂದು ಬಂದವನನ್ನ ಕರೆದು ಮನೆಯ ಬಾಗಿಲು ಹೊಡೆಸಿದ ಸ್ಥಳೀಯರು ಮನೆ ಒಳಗಿನ ದೃಶ್ಯ ನೋಡಿ ಬೆಚ್ಚಿಬಿದ್ದಿದ್ದರು. ಮೃತಪಟ್ಟ ರೂಪಾಳ ಶವದ ಜೊತೆ ನಾಗಮ್ಮ ಕುಳಿತಿದ್ದಳು. ಆತಂಕದ ನಡುವೆಯೇ ಪೂರ್ವ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದ ಸ್ಥಳೀಯರು ಪೊಲೀಸರ ಸಹಾಯದೊಂದಿಗೆ ಮೃತದೇಹ ರವಾನಿಸಿದ್ದರು.

Bengaluru Crime: ಹೋಟೆಲಲ್ಲಿ ತರಕಾರಿ ಹಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ..!

ಸಾವು ನಿಗೂಢ

30 ವರ್ಷ ವಯಸ್ಸಿನ ಮೃತ ರೂಪ ಹೋಮ್ ಗಾರ್ಡ್ ಆಗಿ ಕೆಲಸ ಮಾಡ್ತಿದ್ದರು. ಕೆಲ ತಿಂಗಳ ಹಿಂದೆ ಕಾರಣಾಂತರಗಳಿಂದ ಸಸ್ಪೆಂಡ್ ಆಗಿದ್ದರು. ಇತ್ತೀಚಿಗೆ ಮತ್ತೆ ಕೆಲಸಕ್ಕೆ ಬರುವುದಾಗಿ ಪತ್ರ ಬರೆದಿದ್ದಾರೆ. ಕಳೆದ 10 ವರ್ಷಗಳ ಹಿಂದೆ ವಿವಾಹವಾಗಿದ್ದ ರೂಪ ಕೌಟುಂಬಿಕ ಕಲಹ ಹಿನ್ನೆಲೆ 5 ವರ್ಷಗಳ ಹಿಂದೆ ಗಂಡ ಇಬ್ಬರು ಮಕ್ಕಳನ್ನ ಬಿಟ್ಟು ಪ್ರತ್ಯೇಕವಾಗಿದ್ದಾರೆ. ಗಂಡನಿಂದ ದೂರಾದ ಬಳಿಕ ತಾಯಿ ಮನೆಯಲ್ಲೇ ವಾಸವಿದ್ದರು. ಕೆಲದಿನಗಳಿಂದ ಕುಡಿತದ ಚಟಕ್ಕೆ ತಾಯಿ‌ ಮಗಳಿಬ್ಬರು ಬಲಿಯಾಗಿದ್ದರಂತೆ. ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಇಬ್ಬರ ಮಧ್ಯೆ ಜಗಳವಾಗ್ತಿತ್ತಂತೆ. ಆದ್ರೆ ನಾಲ್ಕು ದಿನಗಳಿಂದ ಯಾವುದೇ ಮಾತುಕತೆ ಇಲ್ಲದೇ ಇಬ್ಬರು ಮನೆಯಿಂದ ಹೊರಬಾರದೆ ಇದ್ದಾಗ ಅಕ್ಕಪಕ್ಕದವರು ಅನುಮಾನಗೊಂಡಿದ್ದರು. 

ದುರ್ವಾಸನೆಗೆ ಬೇಸತ್ತು ಮನೆ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆದ್ರೆ ರೂಪ ಸಾವಿಗೆ ಕಾರಣ ಮಾತ್ರ ಇನ್ನು ತಿಳಿದು ಬಂದಿಲ್ಲ. ನಾಲ್ಕು ದಿನಗಳ ಹಿಂದೆ ಅಕ್ಕದವರನ್ನ ಪ್ರೀತಿಯಿಂದಲೇ ಮಾತನಾಡಿಸಿದ್ದ ರೂಪ ಬಳಿಕ ನಿಗೂಢವಾಗಿ ಸಾವನ್ನಪ್ಪಿರುವುದು ಅನುಮಾನ ಸೃಷ್ಟಿಸಿದೆ. ಸದ್ಯ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು. ಶವಪರೀಕ್ಷೆ ಬಳಿಕ ಸಹಜ ಸಾವೋ ಇಲ್ಲವೋ ಎಂಬ ಸತ್ಯ ಹೊರಬರಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!