ರಾಮನಗರ: ಹಣದ ಆಸೆಗೆ ಹೆತ್ತ ಮಗುವನ್ನೇ ಮಾರಿದ ತಾಯಿ!

Published : Dec 10, 2024, 11:14 PM IST
ರಾಮನಗರ: ಹಣದ ಆಸೆಗೆ ಹೆತ್ತ ಮಗುವನ್ನೇ ಮಾರಿದ ತಾಯಿ!

ಸಾರಾಂಶ

ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಸದ್ದಾಂ ಪಾಷ ತನ್ನ ಪತ್ನಿ ನಸ್ರೀನ್ ತಾಜ್ , ಅಸ್ಲಾಂ, ತರನಂ ಸುಲ್ತಾನ, ಫಾಹಿಮಾ, ಶಾಜಿಯಾ ಬಾನು ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಾಮನಗರ(ಡಿ.10):  ಹಣದ ಆಸೆಗೆ ಬಿದ್ದು ತಾಯಿ ತನ್ನ ಗಂಡನಿಗೂ ತಿಳಿಸದೆ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಸಂಬಂಧ ಪತಿ ಸದ್ದಾಂ ಪಾಷಾ ಎಂಬುವರು ಪತ್ನಿ ನಸ್ರೀನ್ ತಾಜ್ ವಿರುದ್ಧ ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಏನಿದು ಘಟನೆ?:

ರಾಮನಗರದ ಯಾರಬ್ ನಗರದ ನಿವಾಸಿ ಸದ್ದಾಂ ಪಾಷ ಮತ್ತು ಜಿಯಾವುಲ್ಲಾ ಬ್ಲಾಕ್ ನಿವಾಸಿ ನಸ್ರೀನ್ ತಾಜ್ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಲಡ್ಡ ಆರೀಫ್ ಪಿಲ್ಲೇಚೆರಿ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ದಂಪತಿಗೆ ಬಿಬಿ ಆಯಿಷಾ, ಮಹಮ್ಮದ್ ಫಾರನ್ ಮತ್ತು ಮಹಮ್ಮದ್ ಸಾಹಿಲ್ (ಅವಳಿ ಮಕ್ಕಳು) ಎಂಬ ಎರಡೂವರೆ ವರ್ಷದ ಮಕ್ಕಳು ಇದ್ದರು. ತಿಂಗಳ ಹಿಂದೆ ನಸ್ರೀನ್ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮನೆಯಲ್ಲಿ ಪತ್ನಿ, ಮಕ್ಕಳ ಜೊತೆಗೆ ಆಕೆಯ ತಾಯಿ ತಸ್ಕೀನ್ ತಾಜ್ ವಾಸವಿದ್ದರು.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ: ಮೊದಲ ವರ್ಷದಲ್ಲೇ 438 ಕೋಟಿ ಟೋಲ್‌ ಸಂಗ್ರಹ

ಸದ್ದಾಂ ಪಾಷ ಸಾಕಷ್ಟು ಸಾಲ ಮಾಡಿಕೊಂಡಿದ್ದನು. ಈ ಸಾಲ ತೀರಿಸುವ ಕಾರಣಕ್ಕಾಗಿ ಕೊನೆಯ ಮಗುವನ್ನು ಮಾರಾಟ ಮಾಡುವಂತೆ ನಸ್ರೀನ್, ಸದ್ದಾಂಗೆ ಪೀಡಿಸುತ್ತಲೇ ಬಂದಿದ್ದಳು. ಆದರೆ, ಸದ್ದಾಂ ಪತ್ನಿಯ ಮಾತನ್ನು ತಿರಸ್ಕರಿಸಿದ್ದು. ಕೊನೆಗೆ ಡಿ.5ರಂದು ಪತಿ ಕೆಲಸಕ್ಕೆ ಹೋಗಿದ್ದಾಗ ನಸ್ರೀನ್ ಸ್ಥಳೀಯರಾದ ಅಸ್ಲಾಂ ಹಾಗೂ ಫಾಹಿಮಾ ಸಹಾಯದೊಂದಿಗೆ ಬೆಂಗಳೂರಿನ ನಿವಾಸಿ ತರನಂ ಸುಲ್ತಾನ ಎಂಬುವವರಿಗೆ ಗಂಡು ಮಗುವನ್ನು ನೀಡಿದ್ದಾಳೆ. ತರನಂ ಸುಲ್ತಾನ್ ಆ ಮಗುವನ್ನು ತನ್ನ ಸಂಬಂಧಿ ಶಾಜಿಯಾ ಬಾನು ಅವರಿಗೆ ಮಾರಾಟ ಮಾಡಿದ್ದಾಳೆ.

ಪತಿ - ಪತ್ನಿ ನಡುವೆ ಗಲಾಟೆ:

ಇನ್ನು ಪತಿ ಸದ್ದಾಂ ಪಾಷ ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭದಲ್ಲಿ ಮಗು ಎಲ್ಲೆಂದು ವಿಚಾರಿದ್ದಾನೆ. ಈ ವೇಳೆ ನಸ್ರೀನ್ ಮಗುವಿಗೆ ಹುಷಾರಿಲ್ಲ ಸಂಬಂಧಿಕರು ಕರೆದುಕೊಂಡು ಹೋಗಿದ್ದು, ಬೆಳಗ್ಗೆ ವಾಪಸ್ಸು ಬಿಡುತ್ತಾರೆ ಎಂದು ಸಮಜಾಯಿಸಿ ನೀಡಿದ್ಧಾಳೆ.

ಪತ್ನಿಯ ಮಾತನ್ನು ನಂಬಿದ್ದ ಸದ್ದಾಂ ಪಾಷ ಊಟ ಮುಗಿಸಿ ಮಲಗಿದ್ದಾನೆ. ಮರು ದಿನವೂ ಮಗುವಿಗಾಗಿ ದಂಪತಿ ನಡುವೆ ಗಲಾಟೆ ನಡೆದು ಸದ್ದಾಂ ತಲೆಗೆ ಪೆಟ್ಟು ಬಿದ್ದಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮಗು ಎಲ್ಲೆಂದು ಕೇಳಿದಾಗ ಪತ್ನಿ, ಸಂಜೆ ಅಥವಾ ನಾಳೆ ಬೆಳಗ್ಗೆ ಬರುತ್ತಾರೆಂದು ಹೇಳಿದ್ದಾಳೆ.

ಅದರಂತೆ ಡಿ.7ರಂದು ಬೆಳಗ್ಗೆ 9 ಗಂಟೆಗೆ ಮಗುವಿನ ಸಮೇತ ಅಸ್ಲಾಂ ಮತ್ತು ಇಬ್ಬರು ಮಹಿಳೆಯರು ಮನೆಗೆ ಬಂದಿದ್ದಾರೆ. ಆಗ ಸದ್ದಾಂರವರು ಅಸ್ಲಾಂನನ್ನು ವಿಚಾರ ಮಾಡಿದಾಗ ಪೂಲ್ ಬಾಗ್ ನಿವಾಸಿ ಫಾಹಿಮಾ ಮುಖಾಂತರ ಫಾಹಿಮ ಸ್ನೇಹಿತೆ ಬೆಂಗಳೂರಿನ ಬಿವಾಸಿ ತರನಂ ಸುಲ್ತಾನ ಅವರಿಗೆ ತಿಳಿಸಿ, ಅವರಿಂದ ತರನಂ ಸುಲ್ತಾನ ಸಂಬಂಧಿ ಶಾಜಿಯಾ ಬಾನು ಅವರಿಗೆ ಮಗುವನ್ನು ₹1.50 ಲಕ್ಷಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.

ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್‌ ಆದೇಶ

ಆನಂತರ ಡಿ.7ರಂದು ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಸದ್ದಾಂ ಪಾಷ ತನ್ನ ಪತ್ನಿ ನಸ್ರೀನ್ ತಾಜ್ , ಅಸ್ಲಾಂ, ತರನಂ ಸುಲ್ತಾನ, ಫಾಹಿಮಾ, ಶಾಜಿಯಾ ಬಾನು ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಾಮನಗರ ಯಾರಬ್ ನಗರದ ನಿವಾಸಿಗಳಾದ ಸದ್ದಾಂ ಪಾಷ ಹಾಗೂ ನಸ್ರೀನ್ ದಂಪತಿ ಮಗುವನ್ನು ರಕ್ಷಿಸಲಾಗಿದ್ದು, ಪೋಷಣೆ ಮಾಡಲಾಗುತ್ತಿದೆ ಎಂದು ರಾಮನಗರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಜಿತಾ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ