Bengaluru: ಸಂಪ್‌ಗೆ ಬಿದ್ದ ಮಗನ ರಕ್ಷಿಸಲು ಹೋದ ತಾಯಿಯೂ ಸಾವು

Published : Apr 19, 2024, 09:14 AM IST
Bengaluru: ಸಂಪ್‌ಗೆ ಬಿದ್ದ ಮಗನ ರಕ್ಷಿಸಲು ಹೋದ ತಾಯಿಯೂ ಸಾವು

ಸಾರಾಂಶ

ತಾಯಿ ಮತ್ತು ಮಗು ಸಂಪ್‌ಗೆ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಗ್ಗಪ್ಪ ಲೇಔಟ್‌ನ ಕವಿತಾ (30) ಮತ್ತು ಪವನ್‌ (6) ಮೃತ ದುರ್ದೈವಿಗಳು. ಗುರುವಾರ ಸಂಜೆ ಸುಮಾರು 6 ಗಂಟೆಗೆ ಈ ದುರ್ಘಟನೆ ನಡೆದಿದೆ.

ಬೆಂಗಳೂರು (ಏ.19): ತಾಯಿ ಮತ್ತು ಮಗು ಸಂಪ್‌ಗೆ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಗ್ಗಪ್ಪ ಲೇಔಟ್‌ನ ಕವಿತಾ (30) ಮತ್ತು ಪವನ್‌ (6) ಮೃತ ದುರ್ದೈವಿಗಳು. ಗುರುವಾರ ಸಂಜೆ ಸುಮಾರು 6 ಗಂಟೆಗೆ ಈ ದುರ್ಘಟನೆ ನಡೆದಿದೆ.

ಗೌರಿಬಿದನೂರು ಮೂಲದ ಕವಿತಾ ಪತಿಯಿಂದ ದೂರವಾಗಿದ್ದು, ಪುತ್ರನ ಜತೆಗೆ ಸುಗ್ಗಪ್ಪ ಲೇಔಟ್‌ನಲ್ಲಿ ನೆಲೆಸಿದ್ದರು. ವಸುಂಧರಾ ಎಂಬುವವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ಮನೆಯ ಬಳಿಯೇ ಕವಿತಾ ಪುತ್ರನೊಂದಿಗೆ ಉಳಿದುಕೊಂಡಿದ್ದರು. ಗುರುವಾರ ಸಂಜೆ ಕವಿತಾ ಪುತ್ರ ಪವನ್‌ ಹಾಗೂ ಅಕ್ಕನ ಮಗಳು ಆಟವಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಪಕ್ಕದ ಖಾಲಿ ಜಾಗದಲ್ಲಿ ಸುಮಾರು 10 ಅಡಿ ಅಳದ ಸಂಪ್‌ ಇದ್ದು, ಪವನ್‌ ಆಯತಪ್ಪಿ ಆ ಸಂಪ್‌ಗೆ ಬಿದ್ದಿದ್ದಾನೆ.

ಆಗ ಬಾಲಕಿ ಜೋರಾಗಿ ಕಿರುಚಿದ ಪರಿಣಾಮ ಮನೆಗೆಲಸದಲ್ಲಿ ತೊಡಗಿದ್ದ ಕವಿತಾ ಓಡಿ ಬಂದು ಪವನ್‌ನನ್ನು ಸಂಪ್‌ನಿಂದ ಮೇಲೆತ್ತಲು ಮುಂದಾಗಿದ್ದಾರೆ. ಈ ವೇಳೆ ಆಕೆಯೂ ನಿಯಂತ್ರಣ ತಪ್ಪಿ ಸಂಪ್‌ ಒಳಗೆ ಬಿದ್ದಿದ್ದಾರೆ. ಹೀಗಾಗಿ ತಾಯಿ-ಮಗು ಇಬ್ಬರೂ ಸಂಪ್‌ನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪ್ರಧಾನಿ ಮೋದಿಯಿಂದ ನಿಜವಾದ ಮಹಿಳಾ ಸಬಲೀಕರಣ: ಡಾ.ಕೆ.ಸುಧಾಕರ್‌

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಖಾಲಿ ಜಾಗದ ಮಾಲೀಕನ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಿಸಿರುವ ಯಲಂಹಕ ನ್ಯೂಟೌನ್‌ ಠಾಣೆ ಪೊಲೀಸ್‌ ಠಾಣೆ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!