ಪತ್ನಿಗೆ ಆ್ಯಸಿಡ್ ಕುಡಿಸಿದ ಪಾಪಿ ಪತಿ.. ಜೀವನ್ಮರಣ ಹೋರಾಟ

Published : Jul 20, 2021, 10:35 PM ISTUpdated : Jul 20, 2021, 10:42 PM IST
ಪತ್ನಿಗೆ ಆ್ಯಸಿಡ್ ಕುಡಿಸಿದ ಪಾಪಿ ಪತಿ.. ಜೀವನ್ಮರಣ ಹೋರಾಟ

ಸಾರಾಂಶ

* ಪತ್ನಿಗೆ ಆಸಿಡ್ ಕುಡಿಸಿದ ಪಾಪಿ ಪತಿ * ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು * ಆರೋಪಿಯನ್ನು ಕೂಡಲೇ ಬಂಧಿಸಲು ಒತ್ತಾಯ

ಗ್ವಾಲಿಯರ್( ಜು.  20)   ಇದೊಂದು ಘೋರ ಘಟನೆ. ಪತ್ನಿಗೆ ಆಸಿಡ್ ಸೇವನೆ ಮಾಡಲು ಒತ್ತಾಯ ಮಾಡಿದ್ದಾನೆ ಈ ಪಾಪಿ ಪತಿ.  ಮಹಿಳೆಯು ಗಂಭೀರವಾಗಿ ಗಾಯಗೊಂಡಿದ್ದು ಆಕೆಯ ದೇಹದ ಒಳಗಿನ ಅಂಗಗಳಿಗೆ ಹಾನಿಯಾಗಿದೆ.

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್  ಸೋಶಿಯಲ್ ಮೀಡಿಯಾದಲ್ಲಿ ವಿಚಾರ ಹಂಚಿಕೊಂಡಿದ್ದು ಆರೋಪಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯ ಮಾಡಿದ್ದಾರೆ. ಇನ್ನುವರೆಗೆ ಆರೋಪಿಯ ಬಂಧನವಾಗಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಶೃಂಗೇರಿ; ಆಸಿಡ್ ಎರಚಿದ್ದ ದುರುಳರಿಗೆ ಕೊನೆಗೂ ಜೀವಾವಧಿ

ಮಧ್ಯಪ್ರದೇಶದಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಗಾಯಗೊಂಡಿರುವ ಮಹಿಳೆಯ ಹೇಳಿಕೆ ದಾಖಲು ಮಾಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದ ಸಿಎಂ ಶಿವರಾಜ್ ಚೌಹಾಣ್ ಆರೋಪಪಿಯನ್ನು ಕೂಡಲೇ ಬಂಧಿಸಲು ಆದೇಶ ನೀಡಬೇಕು ಎಂದು  ಆಗ್ರಹಿಸಿದ್ದಾರೆ. ಮಧ್ಯಪ್ರದೇಶದ ಡಿಜಿಪಿಗೂ ಪತ್ರ ಬರೆದಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ  ನೀಡಲಾಗುತ್ತಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ