
ಭೋಪಾಲ್(ಏ.23): ಮಧ್ಯಪ್ರದೇಶದ ದೇವಾಸ್ನಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದ ಮೂವರು ಸದಸ್ಯರು ಒಂದು ವಾರದೊಳಗೆ ಕೊರೋನವೈರಸ್ ಸೋಂಕಿಗೆ ಬಲಿಯಾದ ನಂತರ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಿಳೆಯ ಪತಿ, ಸೋದರ ಮಾವ ಮತ್ತು ಅತ್ತೆ ಇಂದೋರ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾದಿಂದ ಇವರು ಮೂವರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದೇ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 25 ಸೋಂಕಿತರು ಸಾವು..!
ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ವ್ಯಾಕ್ಸೀನ್ ಕೊರತೆಯ ಜೊತೆಗೆ ಆಕ್ಸಿಜನ್ ಕೊರತೆಯೂ ತಲೆದೋರಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣ ದಾಖಲಾಗಿದೆ. 2300ಕ್ಕೂ ಹೆಚ್ಚು ಜನರು ಒಂದೇ ದಿನ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ