ಚಿಂಚೋಳಿ: ನಕಲಿ ಬಿಲ್‌ಗೆ ಸಹಿ ಮಾಡದ ಅಧಿಕಾರಿ ಮೇಲೆ ಪುರಸಭೆ ಸದಸ್ಯನ ಗುಂಡಾಗಿರಿ

Suvarna News   | Asianet News
Published : Jan 20, 2021, 10:33 AM IST
ಚಿಂಚೋಳಿ: ನಕಲಿ ಬಿಲ್‌ಗೆ ಸಹಿ ಮಾಡದ ಅಧಿಕಾರಿ ಮೇಲೆ ಪುರಸಭೆ ಸದಸ್ಯನ ಗುಂಡಾಗಿರಿ

ಸಾರಾಂಶ

ಪುರಸಭೆಯ ಮುಖ್ಯಾಧಿಕಾರಿ ಮೇಲೆ ಹಲ್ಲೆ ಮಾಡಿದ ಸದಸ್ಯ| ಪುರಸಭೆ ಕಚೇರಿಯಲ್ಲಿಯೇ ಹಲ್ಲೆ| ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ನಡೆದ ಘಟನೆ| ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಸದಸ್ಯ ಆನಂದ್ ಮತ್ತು ಆತನ ಸಹಚರ ಶಶಿಕುಮಾರ್ ವಿರುದ್ಧ ದೂರು ದಾಖಲು| 

ಕಲಬುರಗಿ(ಜ.20): ಅಧಿಕಾರಿ ಮೇಲೆ ಪುರಸಭೆ ಸದಸ್ಯನೊಬ್ಬ ಗುಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭಾ ಕಚೇರಿಯಲ್ಲಿ ನಿನ್ನೆ(ಮಂಗಳವಾರ) ಸಂಜೆ ನಡೆದಿದೆ. ಪುರಸಭೆ ಸದಸ್ಯನ ಗುಂಡಾಗಿರಿಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.  ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಅಭಯ್ ಅವರ ಮೇಲೆ ಸದಸ್ಯ ಆನಂದ್ ಟೈಗರ್ ಕಚೇರಿಯಲ್ಲಿಯೇ ಹಲ್ಲೆ ನಡೆಸಿದ್ದಾರೆ. 

ತನ್ನ ಬೆಂಬಲಿಗ ಶಶಿಕುಮಾರ್ ಜೊತೆ ಆಗಮಿಸಿದ ಪುರಸಭೆ ಸದಸ್ಯ ಆನಂದ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಾನೆ.  ನಕಲಿ ಬಿಲ್‌ಗಳಿಗೆ ಸಹಿ ಮಾಡಿ, ಚೆಕ್ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಅಭಯ್ ಅವರಿಗೆ ಆನಂದ್ ಡಿಮ್ಯಾಂಡ್ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆ..!

ಸಹಿ ಮಾಡದೇ ಇರೋದಕ್ಕೆ ಅಭಯ್ ಮೇಲೆ ಆನಂದ್ ಟೈಗರ್ ಹಲ್ಲೆ ಮಾಡಿದ್ದಾನೆ. ಅಧಿಕಾರಿ ಅಭಯ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಸದಸ್ಯ ಆನಂದ್ ಮತ್ತು ಆತನ ಸಹಚರ ಶಶಿಕುಮಾರ್ ವಿರುದ್ಧ ದೂರು ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ