Murder In Mandya: ಆಶ್ರಯ ನೀಡಿದ್ದ ಸ್ನೇಹಿತನ ಕತ್ತು ಕೂಯ್ದೇ ಬಿಟ್ಟ ಪಾಪಿ!

Published : Jul 28, 2022, 04:45 PM IST
Murder In Mandya: ಆಶ್ರಯ ನೀಡಿದ್ದ ಸ್ನೇಹಿತನ ಕತ್ತು ಕೂಯ್ದೇ ಬಿಟ್ಟ ಪಾಪಿ!

ಸಾರಾಂಶ

ಸೈಲೆಂಟಾಗಿದ್ದ ಸಕ್ಕರೆ ನಾಡಲ್ಲಿ ಮತ್ತೆ ಹರಿದ ನೆತ್ತರು! ಆಶ್ರಯ ನೀಡಿದ ಸ್ನೇಹಿತನ ಕತ್ತು ಕೂಯ್ದ ಕಿರಾತಕ. ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವರದಿ : ನಂದನ್ ರಾಮಕೃಷ್ಣ, ಏಷ್ಯಾನೆಟ್, ಸುವರ್ಣ ನ್ಯೂಸ್, 

ಮಂಡ್ಯ ಜು.28:: ಅವನ್ನದ್ದು ಮಧ್ಯಮವರ್ಗದ ಕುಟುಂಬ. ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಆತ, ಬೆಳಗ್ಗೆ ಡ್ರೈವಿಂಗ್ ಮುಗಿಸಿ ಸಂಜೆ ವೇಳೆ ಬಾರ್‌‌ನಲ್ಲಿ ದುಡಿಯುತ್ತಿದ್ದ. ಕಷ್ಟದಲ್ಲಿದ್ದ ಸ್ನೇಹಿತನಿಗೆ ತನ್ನ ಮನೆಯನ್ನೇ ಬಾಡಿಗೆ ನೀಡಿದ್ದವನು ಇದೀಗ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಜೊತೆಗೆ ಉಂಡು ತಿಂದ ಆ ಸ್ನೇಹಿತನೇ ಕೊನೆಗೆ ಮುಹೂರ್ತ ಇಟ್ಟಿದ್ದಾನೆ.

"ನಾವು ಯಾವುದೇ ಕಾರಣಕ್ಕೂ ಬಿಡಲ್ಲ, ಇವತ್ತಲ್ಲ ನಾಳೆ ಹೊಡದೇ ಹೊಡಿತೀವಿ". ಇದು ಆತ್ಮೀಯ ಗೆಳೆಯನನ್ನ ಕಳೆದುಕೊಂಡ ಸ್ನೇಹಿತರ‌ ಆಕ್ರೋಶಭರಿತ ಮಾತು. ಇಂತಹ ಮಾತುಗಳು ಕೇಳಿಬಂದಿದ್ದು ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ(Shrirangapattana) ತಾಲೂಕಿನ ಬೆಳಗೊಳ(Belagola) ಗ್ರಾಮದಲ್ಲಿ. ಕಳೆದ ರಾತ್ರಿ ಬಾರ್ ಮುಂದೆ ನಿಂತಿದ್ದ ಯುವಕನನ್ನ ಮಾತನಾಡಿಸುವ ನೆಪದಲ್ಲಿ ಬಂದ ಹಂತಕನೊಬ್ಬ ಕೊಚ್ಚಿ ಕೊಲೆಗೈದಿದ್ದಾನೆ.

ತಾಯಿಯನ್ನು ಕೆಟ್ಟದ್ದಾಗಿ ಕಂಡವನ ತಲೆ ಕಡಿದ ಮಗ

ಕೊಲೆ(Murder)ಯಾದ ಯುವಕನ ಹೆಸರು ರವಿ(Ravi). ಬೆಳಗೊಳ ಗ್ರಾಮದ ನಿವಾಸಿ. 28 ವರ್ಷದ ರವಿ ಮನೆಯ ಜವಾಬ್ದಾರಿ ಹೊತ್ತು ಹಗಲಿರುಳು ದುಡಿಯುತ್ತಿದ್ದನು. ಹಗಲಿನಲ್ಲಿ ಗಾರ್ಮೆಂಟ್ಸ್(Garments) ಕಾರ್ಮಿಕರು ಹಾಗೂ ಶಾಲಾ ಮಕ್ಕಳನ್ನು ಡ್ರಾಪ್ ಪಿಕಪ್ ಮಾಡ್ತಿದ್ದ ಈತ ಸಂಜೆಯಾದರೆ ಬೆಳಗೊಳ ಗ್ರಾಮದಲ್ಲಿರುವ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಕೈ ತುಂಬ ಕೆಲಸ, ನೆಮ್ಮದಿಯ ಸಂಸಾರ ಸಾಗಿಸುತ್ತಿದ್ದವನನ್ನ ಕಳೆದ ರಾತ್ರಿ ಶರತ್ ಎಂಬಾತ ಕೊಲೆಗೈದಿದ್ದಾನೆ. ಮಾತನಾಡುತ್ತಲೆ ಬೆನ್ನಹಿಂದೆ ಬರುವ ಶರತ್ ಮೊದಲಿಗೆ ಆತನ ಕತ್ತು ಕೂಯ್ದು ಮನಸ್ಸೋ ಇಚ್ಛೆ ಕೊಚ್ಚಿದ್ದಾನೆ. ಈ ಭಯಾನಕರ ದೃಶ್ಯ ಬಾರ್‌ನಲ್ಲಿದ್ದ ಸಿಸಿಟಿವಿ(CCTV)ಯಲ್ಲಿ ಸೆರೆಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರವಿ ಸಹಾಯಕ್ಕೆ ಓಡೋಡಿ ಬಂದ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವಿಧಿಯಾಟ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. 

Mandya Crime: ತಾಮ್ರದ ಚೊಂಬು ಜಗಳ ವೇಳೆ ಕೊಲೆ: ಮಾಜಿ MLA ಪುತ್ರ ಸೇರಿ 8 ಮಂದಿ ಸೆರೆ

ಅಷ್ಟಕ್ಕೂ ಕೊಲೆಗೈದ ಶರತ್, ರವಿಯ ಆತ್ಮೀಯ ಸ್ನೇಹಿತ. ಶರತ್ ಕುಟುಂಬ ಕಷ್ಟದಲ್ಲಿದ್ದ ಕಾರಣಕ್ಕೆ ತನ್ನ ಮನೆಯನ್ನೆ ಕಡಿಮೆ ಬಾಡಿಗೆಗೆ ನೀಡಿ ನೆರವಾಗಿದ್ದನು. ರವಿ ಸವಿತಾ ವೈನ್ ಸ್ಟೋರ್‌(Savita wine store)ನಲ್ಲಿ ಕೆಲಸ ಮಾಡಿಕೊಂಡಿದ್ರೆ, ಶರತ್ ಬಾರ್ ಎದುರು ಕಬಾಬ್ ಅಂಗಡಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಪ್ರತಿದಿನ ಕೆಲಸ ಮುಗಿಸಿ ಒಟ್ಟಿಗೆ ಸೇರ್ತಿದ್ದ ಇಬ್ಬರು ಒಂದೇ ಮನೆಯಲ್ಲಿ ಉಂಡು ತಿಂದು ಮಲಗುತ್ತಿದ್ದರು. ಹೀಗೀರುವಾಗಲೇ ಶರತ್ ರವಿಯನ್ನು ಕೊಲೆಗೈದಿರುವುದು ಇಡೀ ಗ್ರಾಮಕ್ಕೆ ಆಘಾತ ತರಿಸಿದೆ. ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ‌ ಮುಳುಗಿದೆ.‌ ಸದ್ಯ ಕೆಆರ್‌ಎಸ್‌ ಠಾಣೆ ಪೊಲೀಸರು(KRS Police Station) ಸ್ಥಳ ಪರಿಶೀಲನೆ ನಡೆಸಿ, ಕೃತ್ಯಕ್ಕೆ ಬಳಸಲಾಗಿದ್ದ ಮಾರಕಾಸ್ತ್ರ ವಶಪಡಿಸಿಕೊಂಡಿದ್ದು, ಪರಾರಿಯಾಗಿರುವ ಹಂತಕನಿಗೆ ಬಲೆ ಬೀಸಿದ್ದಾರೆ. ಆರೋಪಿ ಶರತ್ ಬಂಧಿಸಿ ವಿಚಾರಣೆ ನಡೆಸಿದ ಬಳಿಕವೇ ಕೊಲೆಗೆ ಕಾರಣ ತಿಳಿದು ಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಜಯಪುರದಲ್ಲಿ ವಿಕೃತ ಘಟನೆ, ಹಾಲು ತರಲು ಹೋದ ಮಹಿಳೆಯ ಕಿವಿ ಕತ್ತರಿಸಿ ಚಿನ್ನ ಕದ್ದ ಕಳ್ಳರು!
ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!