Shivamogga: ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕನಿಂದ ತಲ್ವಾರ್ ಅಟ್ಯಾಕ್, ಜಸ್ಟ್ ಮಿಸ್!

By Gowthami KFirst Published Jan 9, 2023, 12:38 PM IST
Highlights

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ತಲ್ವಾರ್ ದಾಳಿ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.  ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ  ಮುಸ್ಲಿಂ ಯುವಕನಿಂದ ತಲ್ವಾರ್ ದಾಳಿ ನಡೆದಿದ್ದು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿವಮೊಗ್ಗ (ಜ.9): ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ತಲ್ವಾರ್ ದಾಳಿ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.  ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ  ಮುಸ್ಲಿಂ ಯುವಕನಿಂದ ತಲ್ವಾರ್ ದಾಳಿ ನಡೆದಿದ್ದು, ಕ್ಷಣ ಮಾತ್ರದಲ್ಲಿ ಸುನೀಲ್ ಬಚಾವಾಗಿದ್ದ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಹಾಡು ಹಾಗಲೇ ಈ ನಡೆದ ಘಟನೆ ನಡೆದಿದ್ದು, ಬೆಚ್ಚಿಬೀಳಿಸುಂತಿದೆ.

ಖಾಸಗಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಬಳಿ ನಿಂತಿದ್ದ ಮುಸ್ಲಿಂ ಯುವಕ ಸಮೀರ್ ಎಂಬಾತ ತಲ್ವಾರ್  ಬೀಸುತ್ತಿದ್ದಂತೆ ಬೈಕ್ ನಲ್ಲಿ ಬಂದಿದ್ದ ಸುನೀಲ್ ಬೈಕ್ ಚಲಾಯಿಸಿಕೊಂಡು ಪಾರಾಗಿದ್ದ. ಈ ಮೂಲಕ ಕೂದಲೆಳೆಯ ಅಂತರದಲ್ಲಿ ಸುನೀಲ್ ಪಾರಾಗಿದ್ದ. 

ನಿನ್ನೆ ಶಿವಮೊಗ್ಗದಲ್ಲಿ ನಡೆದಿದ್ದ ಶೌರ್ಯ ಪತ ಸಂಚಲನ ಕಾರ್ಯಕ್ರಮದಲ್ಲಿ ಸುನೀಲ್ ಭಾಗಿಯಾಗಿದ್ದ, ನಿನ್ನೆ ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸುನೀಲ್ ನ ಮೇಲೆ ದಾಳಿ ನಡೆಸಲು ಸಮೀರ್ ಮುಂದಾಗಿದ್ದ ಎಂದು ತಿಳಿದುಬಂದಿದೆ. ಸಾಗರದ ನೆಹರು ನಗರದ ಸಮೀರ್ ಎಂಬಾತನಿಂದ ಈ ಕೃತ್ಯ ನಡೆದಿದೆ.  ಸಾಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Kodagu: ಹಿಂದೂ ಧರ್ಮ ವಿರೋಧಿ ಪುಸ್ತಕ ಮಾರಾಟ ಯತ್ನ: ಓರ್ವನ ಬಂಧನ

ಹಿಂದೂ ಕಾರ್ಯಕರ್ತರ ಆಕ್ರೋಶ: ಸುನೀಲ್ ಮೇಲಿನ ದಾಳಿ ಹಿನ್ನೆಲೆ, ಸಾಗರದ ನೆಹರೂ ನಗರದಲ್ಲಿರುವ ಆರೋಪಿ ಸಮೀರ್ ಮನೆ ಮುಂದೆ  ಹಿಂದೂಪರ ಸಂಘಟನೆಯ ಕಾರ್ಯಕರ್ತರು  ಜಾಮಾಯಿಸಿದ್ದಾರೆ. ಈ ವೇಳೆ ಮನೆಯಲ್ಲಿ ಸಮೀರ್ ಇರಲಿಲ್ಲ ಎನ್ನಲಾಗಿದೆ. ಮನೆಯೊಳಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು  ತಕ್ಷಣವೇ ಪೊಲೀಸರು   ತಡೆದು ವಾಪಸ್ ಕಳಿಸಿದ್ದಾರೆ.  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಮೀರ್ ದಾಳಿ ನಡೆಸಿದ ಎನ್ನಲಾಗಿದೆ.

ಹಿಂದೂ ದೇವರಿಗೆ ಅವಮಾನ: ನಾಸ್ತಿಕ ನರೇಶ್‌ ಬಂಧನ

ಈ ಹಿಂದೆ ಹಿಜಾಬ್ ಗಲಾಟೆ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಅನ್ಯಕೋಮಿನ ಯುವಕರಿಗೆ ಹೊಡೆದು ಕಳಿಸಿದ್ದ ಎನ್ನಲಾಗಿದೆ.ಇದು ದ್ವೆಷಕ್ಕೆ ತಿರುಗಿದ್ದು ಇಂದು ಸಮೀರ್ ತಲ್ವಾರ್ ಬೀಸುವ ಮೂಲಕ ಸುನಿಲ್ ಮೇಲೆ ಅಟ್ಯಾಕ್ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

click me!