ಬೆಂಗ್ಳೂರು ಮುತ್ತೂಟ್ ಫೈನಾನ್ಸ್‌ನ 77 ಕೆಜಿ ಚಿನ್ನ ಕಳವು: ಇಬ್ಬರು ಅರೆಸ್ಟ್

Published : Jan 01, 2020, 03:14 PM IST
ಬೆಂಗ್ಳೂರು ಮುತ್ತೂಟ್ ಫೈನಾನ್ಸ್‌ನ 77 ಕೆಜಿ ಚಿನ್ನ ಕಳವು: ಇಬ್ಬರು ಅರೆಸ್ಟ್

ಸಾರಾಂಶ

ಬೆಂಗಳೂರಿನ ಮುತ್ತೂಟ್ ಫೈನಾನ್ಸ್‌ನ 77 ಕೆ.ಜಿ ಚಿನ್ನ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಿಸಿಬಿ ವಿಶೇಷ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರು, (ಜ.01): ಬೆಂಗಳೂರಿನ ಮುತ್ತೂಟ್ ಫೈನಾನ್ಸ್ ನಲ್ಲಿ 77 ಕೆ.ಜಿ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನೇಪಾಳದ ಗಡಿ ಭಾಗದಲ್ಲಿ ಸಿಸಿಬಿ ವಿಶೇಷ ತಂಡ ಬಂಧಿಸಿದೆ. ಬಂಧಿತರಿಂದ 8 ಕೆಜಿ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ.  

77 ಕೆಜಿ ಚಿನ್ನ ದೋಚಿದ್ದ ಗ್ಯಾಂಗ್ ಒಂದೂವರೆ ತಿಂಗಳ ಹಿಂದೆ 'ಆ' ಕೆಲಸ ಮಾಡಿತ್ತು!

ಇನ್ನು ಪ್ರಕರಣಕ್ಕೆ ಸಂಬಂಧಿಸಿದ ಉಳಿದ 10 ಆರೋಪಿಗಳಿಗಾಗಿ ಸಿಸಿಬಿ ವಿಶೇಷ ತಂಡ  ಶೋಧ ಕಾರ್ಯ ಮುಂದುವರಿಸಿದೆ. ಪೊಲೀಸರ ಈ ಯಶಸ್ವಿ ಕಾರ್ಯಚರಣೆಗೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮುತ್ತೂಟ್ ಫೈನಾನ್ಸ್  ಕಚೇರಿಯ ಗೋಡೆ ಕೊರೆದು ಕನ್ನ ಹಾಕಿದ್ದ 12 ಮಂದಿ ಆರೋಪಿಗಳು 77 ಕೆಜಿ ಚಿನ್ನವನ್ನು ಹೊತ್ತೊಯ್ದಿದ್ದರು. ಆರೋಪಿಗಳು 77 ಕೆಜಿ ಒಟ್ಟಿಗೆ ಸಾಗಿಸರು ಆಗುವುದಿಲ್ಲ ಎಂಬುದಾಗಿ ತಮ್ಮ ಪಿಜಿಯಲ್ಲಿ ಚಿನ್ನವನ್ನು ಹಂಚಿಕೊಂಡಿದ್ದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ