
ಮೈಸೂರು(ಸೆ.24): ಮೈಸೂರಿನ(Mysuru) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯು ಗುರುವಾರ ಆರೋಪಿಗಳ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಭಾಗಿಯಾಗಿದ್ದರು.
ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಗ್ಯಾಂಗ್ರೇಪ್ನ ಆರೋಪಿಗಳ ಪರೇಡ್ ನಡೆಯಿತು. ಜೈಲಿನಲ್ಲಿರುವ ಆರೋಪಿಗಳನ್ನು ಒಬ್ಬರೊಬ್ಬರನ್ನಾಗಿ ಗುರುತಿಸಿ, ಆರೋಪಿಗಳು ಎಸಗಿದ ದುಷ್ಕೃತ್ಯ ಕುರಿತು ಸಂತ್ರಸ್ತೆ(Victim) ಪೊಲೀಸರಿಗೆ ವಿವರಿಸಿದ್ದಾರೆ. ಮೈಸೂರಿನ ಪೊಲೀಸರು 10 ದಿನಗಳ ಹಿಂದೆಯೇ ಮುಂಬೈಗೆ ತೆರಳಿ ಸಂತ್ರಸ್ತೆಯ ಮನೆಯಲ್ಲೇ ಸೆಕ್ಷನ್ 161 ಅಡಿ ಹೇಳಿಕೆ ಪಡೆದಿದ್ದರು. ಪೊಲೀಸರ ಪ್ರಶ್ನೆಗಳಿಗೆ ಧನಾತ್ಮಕವಾಗಿ ಉತ್ತರಿಸಿದ್ದ ಸಂತ್ರಸ್ತೆ, ಬಂಧಿತ ಎಲ್ಲ ಆರೋಪಿಗಳನ್ನು ಫೋಟೋಗಳ ಮೂಲಕವೇ ಪತ್ತೆ ಹಚ್ಚಿದ್ದರು. ಅಲ್ಲದೆ, ಪ್ರತಿ ಆರೋಪಿಯೂ ಮಾಡಿದ ಆಪರಾಧ ಕೃತ್ಯಗಳ ಬಗ್ಗೆ ಪೊಲೀಸರ(Police) ಮುಂದೆ ವಿವರಿಸಿದ್ದರು.
ಅಪಹರಿಸಿ ಗ್ಯಾಂಗ್ ರೇಪ್ ಮಾಡಿ ಅಂಗಾಂಗ ಸುಟ್ಟರು: ಕ್ರೌರ್ಯ ಬಿಚ್ಚಿಟ್ಟ ಯಾದಗಿರಿ ಸಂತ್ರಸ್ತೆ
ಇದಾದ ಮೇಲೆ ಮೈಸೂರಿಗೆ ಆಗಮಿಸಿರುವ ಸಂತ್ರಸ್ತೆ, ಬುಧವಾರ ಮ್ಯಾಜಿಸ್ಪ್ರೇಟ್ ಎದುರು ತನ್ನ ಹೇಳಿಕೆ ದಾಖಲಿಸಿದ್ದರು. ಈಗ ಆರೋಪಿಗಳ ಗುರುತು ಪತ್ತೆ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಪ್ರಕರಣದ ತನಿಖೆ ಹಾಗೂ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಗೆ ಸಹಕಾರ ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಈ ಹೀನ ಕೃತ್ಯಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಮುಕರಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ರಾಜ್ಯದ ಜನರು ಪ್ರತಿಭಟನೆಗಳ ಮೂಲಕ ಆಗ್ರಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ