ಮೈಸೂರಿನಲ್ಲಿ ಮಂಗಳಮುಖಿಯರ ಮೇಲೆ ಕ್ರೂರ ಹಲ್ಲೆ: ಮೂವರು ಆರೋಪಿಗಳು ವಶಕ್ಕೆ

Published : Mar 31, 2026, 04:32 PM IST
Transgender Attack

ಸಾರಾಂಶ

ಮುಸ್ಲಿಂ ಯುವಕರು ಕೇಳಿದ ಹಣವನ್ನು ಕೊಡಲು ನಿರಾಕರಿಸಿದ ಕೋಪಕ್ಕೆ ಮಂಗಳಮುಖಿಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದೆ.

ಮೈಸೂರು (ಮಾ.31): ಅವರೆಲ್ಲ ಮಂಗಳ ಮುಖಿಯರು. ಸಮಾಜದ ಮೂಲ ಸ್ಥರದಿಂದ ದೂರ ತಳ್ಳಲ್ಪಟ್ಟಿರುವವರು. ಜೀವನೋಪಾಯಕ್ಕಾಗಿ ಭಿಕ್ಷಾಟನೆ ಸೇರಿ ನಾನಾ ಕಸರತ್ತು ಮಾಡುವವರು. ಅಂತಹ ಅಸಹಾಯಕರನ್ನೇ ಹಣಕ್ಕಾಗಿ ಹಿಂಸಿಸಿ ಮುಖವನ್ನು ಕುಯ್ಯಲಾಗಿದೆ. ಮಂಗಳಮುಖಿಯರ ಮೇಲೆ ಮುಸ್ಲಿಂ ಯುವಕರು ಮಾಡಿದ ಅಟ್ಟಹಾಸ ಸಾಂಸ್ಕೃತಿಕ ನಗರಿ ಮೈಸೂರು ಜನರನ್ನು ಬೆಚ್ಚಿ ಬೀಳಿಸಿದೆ.

ಮುಸ್ಲಿಂ ಯುವಕರು ಕೇಳಿದ ಹಣವನ್ನು ಕೊಡಲು ನಿರಾಕರಿಸಿದ ಕೋಪಕ್ಕೆ ಮಂಗಳಮುಖಿಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಭಾನುವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದ್ದು, ಹಲ್ಲೆ ದೃಶ್ಯಗಳು ಬೆಚ್ಚಿ ಬೀಳಿಸುತ್ತಿವೆ. ಚಾಕು, ತಲ್ವಾರ್‌ಗಳಿಂದ ಹಲ್ಲೆ ನಡೆಸಿರುವ ಮುಸ್ಲಿಂ ಯುಕರು, ಓರ್ವ ಮಂಗಳಮುಖಿಯ ಮುಖವನ್ನು ಚಾಕುವಿನಿಂದ ಕುಯ್ದಿದ್ದಾರೆ. ಅಲ್ಲದೆ ಗಲಾಟೆ ಬಿಡಿಸಲು ಬಂದ ಮತ್ತೊಬ್ಬ ಮಂಗಳ ಮುಖಿಗೂ ಹಲ್ಲೆ ಮಾಡಲಾಗಿದೆ.

ಮೈಸೂರಿನ‌ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದ ಹಲ್ಲೆಯಲ್ಲಿ ಪಾರಿ (30), ಆನಮ್ (21) ಎಂಬ ಮಂಗಳಮುಖಿಯರು ಗಾಯಗೊಂಡಿದ್ದಾರೆ. ಅದೇ ಏರಿಯಾದ ತಬ್ರೇಸ್ ಅಲಿಯಾಸ್ ಗುಡಿ ಮತ್ತು ಸಯ್ಯದ್ ಫರ್ದಿನ್ ಎಂಬುವರೇ ತಲ್ವಾರ್‌ನಿಂದ ಹಲ್ಲೆ ನಡೆಸಿದ ಆರೋಪಿಗಳಾಗಿದ್ದು, ಘಟನೆ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮೆಡಿಕಲ್ ಸ್ಟೋರ್ ಗೆ ಹೋಗಿ ಔಷಧಿ ತೆಗೆದುಕೊಂಡು ಬರುವಾಗ ನನ್ನ ಬಳಿ ಇರುವ ದುಡ್ಡನ್ನು ಕೇಳಿದ ಆರೋಪಿಗಳು ನಿರಾಕರಿಸಿದಾಗ ಹಲ್ಲೆ ಮಾಡಿ ಗಲಾಟೆ ಮಾಡಿದ್ದಾರೆ.

ಮೂವರು ಆರೋಪಿಗಳು ವಶಕ್ಕೆ

ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹಲ್ಲೆಮಾಡಿ ಕೊಲೆ ಯತ್ನ ನಡೆಸಿದ್ದಾರೆ ಎಂದು ಪರ್ದೀನ್ ಅಲಿಯಾಸ್ ಪದ್ದು, ದಾದಾಪಿ‌ ಅಲಿಯಾಸ್ ಗುಡಿ, ರಿಯನ ಹಾಗೂ ಇತರರ ಮೇಲೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ಮೂರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ ಬದುಕು ನಡೆಸಲು ಭಿಕ್ಷೆ ಬೇಡುವ ಇಂತಹವರ ಬಳಿಯೇ ಹಣ ಕೀಳಲು ಮುಂದಾದ ನೀಚರ ಬಗ್ಗೆ ಅಸಹ್ಯ ಹುಟ್ಟಿರೋದು ಮಾತ್ರ ಸತ್ಯ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜೈಶ್ ಸಂಘಟನೆಯ ಮತ್ತೊಬ್ಬ ಉಗ್ರನ ನಿಗೂಢ ಸಾವು! ಪಾಕಿಸ್ತಾನದಲ್ಲಿ ನಡೆದದ್ದೇನು? ಯಾರೀ ಭಯೋತ್ಪಾದಕ
Tumakuru: ಹೆಂಡ್ತಿಯೊಂದಿಗೆ ಅಕ್ರಮ ಸಂಬಂಧ ಶಂಕೆ: ತಮ್ಮನ ಹೊಟ್ಟೆಗೆ ಚಾಕು ಚುಚ್ಚಿದ ಅಣ್ಣ