
ಮಂಡ್ಯ (ಸೆ.21): ನಾಗಮಂಗಲ ಕೋಮುಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ಗ್ರಾಮ ತೊರೆದಿದ್ದ ಯುವಕನೋರ್ವ ಬ್ರೈನ್ ಸ್ಟ್ರೋಕ್ನಿಂದ ಮೃತಪಟ್ಟ ಘಟನೆ ನಡೆದಿದೆ.
ಕಿರಣ್ (23) ಮೃತ ದುರ್ದೈವಿ. ಸೆಪ್ಟೆಂಬರ್ 11 ರ ರಾತ್ರಿ ಘಟನೆ ನಡೆದ ನಂತರ ಗ್ರಾಮ ತೊರೆದಿದ್ದ ಯುವಕ. ಯುವಕನಿಗೆ ಬ್ರೈನ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಗೆ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಮೃತಪಟ್ಟಿರುವ ಯುವಕ. ಈಗಾಗಲೇ ಪ್ರಕರಣ ಸಂಬಂಧ ಎ17 ಆರೋಪಿಯಾಗಿ ಮಂಡ್ಯ ಕಾರಾಗೃಹದಲ್ಲಿರುವ ಮೃತ ಕಿರಣ್ ತಂದೆ ಕುಮಾರ್. ತಂದೆ ಜೈಲಿನಲ್ಲಿರುವಾಗಲೇ ಇತ್ತ ಮಗ ಕಿರಣ್ ಬ್ರೈನ್ ಸ್ಟ್ರೋಕ್ನಿಂದ ಮೃತಪಟ್ಟಿರುವುದು ಕುಟುಂಬಸ್ಥರ ಸಂಕಟ ಹೇಳತೀರದಾಗಿದೆ.
ನಾಗಮಂಗಲದ ಗಲಭೆ ಪೂರ್ವಯೋಜಿತ: ಬಿಜೆಪಿ ಸತ್ಯಶೋಧನೆ ಸಮಿತಿ ವರದಿ
ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯವಾಳಿ ಪರಿಶೀಲನೆ ನಡೆಸುತ್ತಿರುವ ತಿಳಿದು ಊರು ತೊರೆದಿರುವ ಯುವಕರು. ಇತ್ತ ಪೊಲೀಸರು ಯುವಕರು ಊರಿಗೆ ಬರುವುದನ್ನೆ ಕಾಯುತ್ತಿದ್ದಾರೆ. ಬದರಿಕೊಪ್ಪಲಿನ ಯುವಕರು ಹಾಗೂ ಮುಸ್ಲಿಂ ಪ್ರದೇಶದ ಯುವಕರು ಗಂಡಸರು ಊರಿಗೆ ಬರುವುದಕ್ಕೆ ಹೆದರುತ್ತಿದ್ದಾರೆ. ಪೊಲೀಸರು ಆರೋಪಿಗಳನ್ನು ಹುಡುಕಿಕೊಂಡು ಹೋಗಿ ಬಂಧಿಸುತ್ತಿದ್ದಾರೆ ಇದರಿಂದ ಬಂಧನ ಭೀತಿಗೆ ಒಳಗಾಗಿರುವ ಯುವಕರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ