
ಪುತ್ತೂರು (ನ.27) : ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರದಲ್ಲಿ ಖಿನ್ನತೆಗೆ ಒಳಗಾದ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕ್ರೀಟನಾಶಕ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(೧೭) ಮೃತಪಟ್ಟ ವಿದ್ಯಾರ್ಥಿನಿ.
ದಪ್ಪಗಿದ್ದೇನೆಂದು ಮನನೊಂದು ಮಂಗಳೂರು ಎಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರನ್ನಿಂಗ್ ರೇಸ್ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದರು ಎನ್ನಲಾಗಿದೆ. ಬಳಿಕ ತೀರಾ ಖಿನ್ನತೆಗೆ ಒಳಗಾಗಿದ್ದ ನಿಶಾ ವಾರದ ಹಿಂದೆ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಬಟ್ಟ ಬಯಲಿನಲ್ಲಿ ಮಹಿಳೆಯ ಸೀರೆ ಹಿಡಿದೆಳೆದ ಪರಪುರುಷ: ಮನನೊಂದು ಆತ್ಮಹತ್ಯೆಗೆ ಶರಣಾದ ಗೃಹಿಣಿ
ನಿಶಾ ಅವರಿಗೆ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿತ್ತು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ