
ನೆಲಮಂಗಲ (ಜ.7): ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನೆಲಮಂಗಲ ತಾಲೂಕಿನ ಹುಣಸೇಘಟ್ಟೆಪಾಳ್ಯದಲ್ಲಿ ನಡೆದಿದೆ. ಪತ್ನಿಯ ಕೊಲೆ ಆರೋಪಿ ಪತಿ ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಕನಕಪುರ ಮೂಲದ ಅರ್ಚನಾ(24) ಮೃತ ದುರ್ದೈವಿ. ಆನಂದ್ ಬಂಧಿತ ಆರೋಪಿ.
ಕ್ಷುಲ್ಲಕ ಕಾರಣಕ್ಕೆ ಪತ್ನಿ ಅರ್ಚನ ಜೊತೆ ಜಗಳ ಮಾಡುತ್ತಿದ್ದ ಪತಿ. ಇತ್ತೀಚೆಗೆ ಶಾರದಮ್ಮ ಎಂಬುವವರ ತೋಟದ ಕೆಲಸಕ್ಕೆ ಬಂದಿದ್ದ ದಂಪತಿ. ತೋಟದಲ್ಲೂ ವಿನಾಕಾರಣ ಜಗಳ ಪತ್ನಿಯೊಂದಿಗೆ ಜಗಳ ತೆಗೆದಿದ್ದ ಆನಂದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಅಲ್ಲೇ ಇದ್ದ ಕೇಬಲ್ ವೈರ್ನಿಂದ ಪತ್ನಿ ಅರ್ಚನಾ ಕುತ್ತಿಗೆಗೆ ಬಿಗಿದು ಹತ್ಯೆಗೈದಿದ್ದಾನೆ.
ತೋಟದ ಮನೆಯಲ್ಲಿ ಪತ್ನಿಯ ಮೇಲೆ ಹಲ್ಲೆ ಮಾಡಿ ಕೋಪದಲ್ಲಿ ಕೇಬಲ್ ವೈರ್ನಿಂದ ಕುತ್ತಿಗೆ ಬಿಗಿದು ಹತ್ಯೆಗೈದ ಬಳಿಕ. ಇದು ತಾನು ಕೊಲೆ ಮಾಡಿದ್ದು ಎಂಬ ಸಂಶಯ ಬಾರದಂತೆ ಪತ್ನಿ ಕೇಬಲ್ ವೈರ್ನಿಂದ ನೇಣು ಬಿಗಿದು ಆತ್ಮಹ೧ತ್ಯೆ ಮಾಡಿಕೊಂದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆನಂದ. ಘಟನೆ ಮಾಹಿತಿ ತಿಳಿದು ಪೊಲೀಸರ ಪರಿಶೀಲಿಸಿದಾಗ ಗಂಡ ಆನಂದನೇ ಪತಿಯ ಹತ್ಯೆ ಮಾಡಿರುವುದು ಬಯಲಾಗಿದೆ.
ಸದ್ಯ ಪರಾರಿಯಾಗಿದ್ದ ಆರೋಪಿಯನ್ನ ಪತ್ತೆ ಹಚ್ಚಿಬಂಧಿಸಿರುವ ಪೊಲೀಸು ವಿಚಾರಣೆ ಮುಂದುವರಿಸಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ