Uttara Kannada: ಸಿದ್ದಾಪುರ ರಸ್ತೆಬದಿ ರಟ್ಟಿನ ಬಾಕ್ಸ್‌ನಲ್ಲಿ ನವಜಾತ ಗಂಡು ಶಿಶು ಪತ್ತೆ

Published : Dec 20, 2022, 11:09 AM ISTUpdated : Dec 20, 2022, 11:10 AM IST
Uttara Kannada: ಸಿದ್ದಾಪುರ ರಸ್ತೆಬದಿ ರಟ್ಟಿನ ಬಾಕ್ಸ್‌ನಲ್ಲಿ ನವಜಾತ ಗಂಡು ಶಿಶು ಪತ್ತೆ

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಆದರೆ, ಗಂಡು ಮಗು ಅಂಗವೈಕಲ್ಯವನ್ನು ಹೊಂದಿದ್ದರಿಂದ ಪೋಷಕರೇ ಮಗುವನ್ನು ರಟ್ಟಿನ ಬಾಕ್ಸ್‌ನಲ್ಲಿ ಹಾಕಿ ರಸ್ತೆಯ ಪಕ್ಕದಲ್ಲಿ ಇಟ್ಟು ಹೋಗಿರುವ ಅಮಾನವೀಯ ಘಟನೆ ವರದಿಯಾಗಿದೆ.

ಉತ್ತರ ಕನ್ನಡ (ಡಿ.20): ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಆದರೆ, ಮಗು ಅಂಗವೈಕಲ್ಯವನ್ನು ಹೊಂದಿದ್ದರಿಂದ ಪೋಷಕರೇ ಮಗುವನ್ನು ರಟ್ಟಿನ ಬಾಕ್ಸ್‌ನಲ್ಲಿ ಹಾಕಿ ರಸ್ತೆಯ ಪಕ್ಕದಲ್ಲಿ ಇಟ್ಟು ಹೋಗಿರುವ ಅಮಾನವೀಯ ಘಟನೆ ನಡೆದಿದೆ.

ದೇಶದಲ್ಲಿ ಅದೆಷ್ಟೋ ಲಕ್ಷಾಂತರ ಜನರು ತಮಗೆ ಮಕ್ಕಳಿಲ್ಲ ಎಂಬ ಕೊರಗಿನಿಂದಲೇ ಜೀವವನ್ನು ಮುಗಿಸಿದ್ದಾರೆ. ಆದರೆ, ಕೆಲವೊಬ್ಬರು ಮಕ್ಕಳಿದ್ದರೂ ಇದು ನಮಗೆ ಬೇಡವೆಂದು ಅನಾಥಾಶ್ರಮ ಅಥವಾ ಪೋಷಣೆ ಮಾಡುವ ಕೇಂದ್ರಕ್ಕೆ ಮಕ್ಕಳನ್ನು ಬಿಡುತ್ತಾರೆ. ಇನ್ನು ಅವಿದ್ಯಾವಂತ ಮತ್ತು ಸುರಕ್ಷಿತವಲ್ಲದ ಲೈಂಗಿಕ ಕ್ರಿಯೆಯಿಂದ ಜನಿಸಿದ ಮಗುವನ್ನು ಎಲ್ಲೆಂದರಲ್ಲಿ ಎಸೆದಿರುವ ಘಟನೆಗಳು ವರದಿಯಾಗಿದೆ. ಇನ್ನೂ ಮುಂದುವರೆದು ಕೆಲವರು ಗರ್ಭವನ್ನು ಆಸ್ಪತ್ರೆಯಲ್ಲಿಯೇ ತೆಗೆಸಿಬಿಡುತ್ತಾರೆ. ಆದರೆ, ಇದ್ಯಾವುದನ್ನೂ ಮಾಡದ ಕ್ರೂರಿ ಪೋಷಕರು ಆಗ ತಾನೇ ಹುಟ್ಟಿದ ಮಗು ಅಂಗವಿಕಲ ಆಗಿದೆ ಎಂದು ಅದನ್ನು ರಟ್ಟಿನ ಬಾಕ್ಸ್‌ನಲ್ಲಿ ಇಟ್ಟು ರಸ್ತೆ ಪಕ್ಕದಲ್ಲಿ ಇಟ್ಟು ಹೋಗುರುವ ಅಮಾನವೀಯ ಘಟನೆ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ.

Tamil Nadu: ಸರ್ಕಾರಿ ಶಾಲೆ ಶೌಚಾಲಯದಲ್ಲಿ ಪತ್ತೆಯಾಯ್ತು ನವಜಾತ ಶಿಶು ಶವ..!

ಶಿಶು ರಕ್ಷಣೆ ಮಾಡಿದ ಪೊಲೀಸರು: ಸಿದ್ದಾಪುರದ ಗುಡ್ಡೆಕೊಪ್ಪ ಮಾರ್ಗದ ರಸ್ತೆಯ ಪಕ್ಕದಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ಇರಿಸಿ ನವಜಾತ ಶಿಶುವನ್ನು ಇಟ್ಟು ಹೋಗಿರುವುದನ್ನು ಕಂಡ ಸಾರ್ವಜನಿಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಗುವಿನ ರಕ್ಷಣೆ ಮಾಡಿದ್ದಾರೆ. ಕೂಡಲೇ ಶಿಶು ಅಭಿವೃದ್ಧಿ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿ ಮಗುವನ್ನು ಆರೈಕೆ ಮಾಡುವಂತೆ ಒಪ್ಪಿಸಿದ್ದಾರೆ. ಇನ್ನು ಎರಡು ವಾರದ ಗಂಡು ಮಗು ಅಂಗವೈಕಲ್ಯ ಹೊಂದಿದ್ದರಿಂದಲೇ ರಸ್ತೆ ಬದಿಯಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!