ಬೆಂಗಳೂರಿನಲ್ಲಿ ಉಗ್ರರ ಕರಿನೆರಳು, PGಯಲ್ಲಿ NIA ತಂಡದಿಂದ ಶೋಧ

Published : Nov 22, 2019, 05:08 PM ISTUpdated : Nov 23, 2019, 12:09 PM IST
ಬೆಂಗಳೂರಿನಲ್ಲಿ ಉಗ್ರರ ಕರಿನೆರಳು, PGಯಲ್ಲಿ NIA ತಂಡದಿಂದ ಶೋಧ

ಸಾರಾಂಶ

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಅನ್ಸರುಲ್ಲಾ ಬಾಂಗ್ಲಾ ಮೂಲದ ಉಗ್ರರ ಕರಿ ನೆರಳು ಬಿದ್ದಿದ್ದು, ಎನ್‌ಐಎ ಅಧಿಕಾರಿಗಳು ತಂಡ ಉಗ್ರರ ಅಡಗುತಾಣಗಳ ಬಗ್ಗೆ ತೀವ್ರ ತನಿಖೆ ನಡೆಸಿದೆ.

"

ಬೆಂಗಳೂರು, (ನ.22): ಸಿಲಿಕಾನ್ ಸಿಟಿಯಲ್ಲಿ ಬಾಂಗ್ಲಾ ಮೂಲದ ಉಗ್ರರು ನೆಲೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ರಾಷ್ಟ್ರೀಯ ತನಿಖಾ ತಂಡ ಚುರುಕಿನ ತಪಾಸಣೆ ನಡೆಸಿದೆ.

ಬೆಂಗಳೂರಿನ ಸೋಲದೇವನಹಳ್ಳಿಯ ಪ್ಯಾರಡೈಸ್ ಪಿಜಿಯಲ್ಲಿ ಉಗ್ರರು ಅಡಗಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಎನ್‌ಐಎ ಅಧಿಕಾರಿಗಳು  ತಪಾಸಣೆ ತೀವ್ರಗೊಳಿಸಿದ್ದಾರೆ. ಕೋಲ್ಕತ್ತಾ ಎನ್‌ಐಎ ಅಧಿಕಾರಿಗಳು ಕೆಲ ದಿನಗಳ ಹಿಂದೆ  ಮೇಘಾಲಯದಲ್ಲಿ ಫರ್ಹಾನ್ ಎಂಬಾತನನ್ನು ಬಂಧಿಸಿದ್ದರು. 

ಸ್ಫೋಟಕ ಮಾಹಿತಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಗ್ರರ ಕರಿ ನೆರಳು

ಬಾಂಗ್ಲಾ ಮೂಲದ ಅನ್ಸರುಲ್ಲಾ ಎಂಬ ಉಗ್ರ ಸಂಘಟನೆಯ ಭಯೋತ್ಪಾದಕರು ವಿದ್ಯಾರ್ಥಿಗಳ ಸೋಗಿನಲ್ಲಿ ಬೆಂಗಳೂರಿನ ಸೋಲದೇವನಹಳ್ಳಿಯ ಪಿಜಿಯಲ್ಲಿ ನೆಲೆಸಿದ್ದಾರೆಂಬ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ. ಅಲ್ಲದೇ ಈತನೊಂದಿಗೆ ಇನ್ನೊಬ್ಬ ಉಗ್ರ ಇದೇ ಪಿಜಿಯಲ್ಲಿ ತಂಗಿದ್ದ ವಿಚಾರವನ್ನೂ ಸಹ ಎನ್‌ಐಎ ಅಧಿಕಾರಿಗಳ ಮುಂದೆ ಹೇಳಿದ್ದಾನೆ. 

ಈ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ಎನ್‌ಐಎ ಅಧಿಕಾರಿಗಳು ಸೋಲದೇವನಹಳ್ಳಿಯ ಪಿಜಿಯನ್ನು ಮಹಾಜರು ಮಾಡಿದ್ದು, ಉಗ್ರರ ಅಡಗುತಾಣಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ ಆಯ್ತು, ಇದೀಗ ಮತ್ತೊಂದು ಬಾಂಗ್ಲಾ ಉಗ್ರ ಸಂಘಟನೆ ನಗರಕ್ಕೆ ಎಂಟ್ರಿ ಕೊಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಉಗ್ರರ ವಾಸ್ತವ್ಯಕ್ಕೆ ಬೆಂಗಳೂರು ಸೇಫ್ ಸಿಟಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ