ರಾಮೇಶ್ವರಂ ಕೆಫೆ ಬಾಂಬ್ ಕೇಸ್: ಶಂಕಿತನಿಗಾಗಿ ತುಮಕೂರು, ಬಳ್ಳಾರಿಯಲ್ಲಿ ಎನ್‌ಐಎ ಶೋಧ

Published : Mar 07, 2024, 09:46 AM IST
ರಾಮೇಶ್ವರಂ ಕೆಫೆ ಬಾಂಬ್ ಕೇಸ್: ಶಂಕಿತನಿಗಾಗಿ ತುಮಕೂರು, ಬಳ್ಳಾರಿಯಲ್ಲಿ ಎನ್‌ಐಎ ಶೋಧ

ಸಾರಾಂಶ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್‌ ತುಮಕೂರಿನಲ್ಲಿ ಓಡಾಡಿದ್ದ ಎಂಬ ಅನುಮಾನ ಹಿನ್ನೆಲೆಯಲ್ಲಿ ತಮಕೂರು ಹಾಗೂ ಬಳ್ಳಾರಿಯಲ್ಲಿ ಬೆಂಗಳೂರಿನ ಪೊಲೀಸರು ಹುಡುಕಾಟ ನಡೆಸಿದ್ದಾರೆ. 

ತುಮಕೂರು(ಮಾ.07): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್‌ ತುಮಕೂರಿನಲ್ಲಿ ಓಡಾಡಿದ್ದ ಎಂಬ ಅನುಮಾನ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರು ಹುಡುಕಾಟ ನಡೆಸಿದ್ದಾರೆ. 

ಶಂಕಿತ ಬಾಂಬರ್‌ ಮಾರ್ಚ್‌ 1ರಂದು ತುಮಕೂರಿನಲ್ಲಿ ಓಡಾಡಿದ್ದ ಎಂಬ ಶಂಕೆ ಹಿನ್ನೆಲೆಯಲ್ಲಿ ಆತನ ಸುಳಿವಿಗಾಗಿ ತುಮಕೂರಿನಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಇಬ್ಬರು ಡಿಸಿಪಿ ನೇತೃತ್ವದಲ್ಲಿ 28 ವಾಹನಗಳಲ್ಲಿ ಆಗಮಿಸಿದ ಪೊಲೀಸರು ತುಮಕೂರಿನ ರೈಲ್ವೆ ನಿಲ್ದಾಣ, ಮಂಡಿಪೇಟೆ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಶಂಕಿತನ ಹೆಜ್ಜೆ ಗುರುತು ಪತ್ತೆ ಹಚ್ಚಲು ಹುಡುಕಾಟ ನಡೆಸಿದ್ದಾರೆ. ನಗರದ ಬೇರೆ ಬೇರೆ ಭಾಗಗಳಲ್ಲಿ ಇರುವ ಹಲವು ಸಿಸಿ ಕ್ಯಾಮರಾಗಳ ದೃಶ್ಯವನ್ನು ಎನ್‌ಐಎ ಅಧಿಕಾರಿಗಳ ತಂಡ ವೀಕ್ಷಿಸಿದ್ದು, ತುಮಕೂರು ಪೊಲೀಸರ ಜೊತೆ ಶೋಧ ನಡೆಸಿದರು.

Breaking: ರಾಮೇಶ್ವರಂ ಕೆಫೆ ಬ್ಲಾಸ್ಟ್‌, ಬಾಂಬರ್‌ನ ಮಾಹಿತಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ!

ಬಳ್ಳಾರಿಗೆ ಬಂದ ಎನ್ಐಎ ತಂಡ

ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್ಐಎ ತಂಡ ಮಾಹಿತಿಯನ್ನ ಪಡೆದುಕೊಂಡಿದೆ. ಎನ್ಐಎ ತಂಡಕ್ಕೆ ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಾಥ್ ನೀಡಿದ್ದರು.  ಆರೋಪಿ ಘಟನೆ ನಡೆದ ಬಳಿಕ ತುಮಕೂರು ಮೂಲಕ ಬಳ್ಳಾರಿ ಬಸ್ ನಿಲ್ದಾಣಕ್ಕೆ ಬಂದಿದಿದ್ದನಂತೆ. ಬಳ್ಳಾರಿ ಬಸ್ ನಿಲ್ದಾಣದಿಂದ ಮಂತ್ರಾಲಯ ಗೋಕರ್ಣ ಬಸ್ ಮೂಲಕ ಭಟ್ಕಳಗೆ ತೆರಳಿದ್ದಾನೆ. ಹೀಗಾಗಿ ಎನ್ಐಎ ತಂಡ ಬಳ್ಳಾರಿ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದೆ.

ಹತ್ತುಕ್ಕೂ ಹೆಚ್ಚು ಅಧಿಕಾರಿಗಳು ಬೆಂಗಳೂರಿಂದ ಎರಡು ಎರಡು ಕಾರುಗಳಲ್ಲಿ ಬಂದಿದ್ದು, ಬಳ್ಳಾರಿಯಿಂದಲೇ ಬೇರೆಡೆ ತೆರಳಿದ ಹಿನ್ನಲೆ ಬಳ್ಳಾರಿ ನಿಲ್ದಾಣದಲ್ಲಿ ಮಾಹಿತಿ ಪಡೆಯಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!