
ಬೆಂಗಳೂರು(ಫೆ.11): ಸ್ಯಾಂಡಲ್ವುಡ್ ಹಾಗೂ ಕಿರುತೆರೆ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಪದ್ಮಜಾ ರಾವ್ಗೆ ವಾರೆಂಟ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ 40 ಲಕ್ಷ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯದಿಂದ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. ಈ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆಗೆ ವಾರೆಂಟ್ ಪ್ರತಿ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
`ಪ್ರಾಣಿ' ಪ್ರಿಯೆ, ಪ್ರೀತಿಯ ಅಮ್ಮ ಪದ್ಮಜಾ ರಾವ್ ಪ್ರಾರ್ಥನೆ..!
ಏನಿದು ಪ್ರಕರಣ?
ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್ನಿಂದ ನಟಿ ಪದ್ಮಜಾ ರಾವ್ ಹಂತ ಹಂತವಾಗಿ 41 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ಭದ್ರತೆಗಾಗಿ 40 ಲಕ್ಷ ರೂಪಾಯಿಗಳ ಚೆಕ್ ನೀಡಿದ್ದರು. ಪದ್ಮಜಾ ರಾವ್ ಸಾಲ ವಾಪಾಸು ನೀಡದೇ ಇದ್ದಾಗ ಚೆಕ್ ಹಾಕಲಾಗಿತ್ತು. ಖಾತೆಯಲ್ಲಿ ಹಣವಿಲ್ಲದೆ ಚೆಕ್ ಬೌನ್ಸ್ ಆಗಿತ್ತು. ಈ ಬಗ್ಗೆ ಮಂಗಳೂರಿನ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯದಲ್ಲಿ ಮೊಕದ್ದಮೆ ಕೂಡ ದಾಖಲಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದ ಸಮನ್ಸ್ ಸ್ವೀಕರಿಸಲು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ ಪದ್ಮಜಾ ರಾವ್ ವಾರೆಂಟ್ ಜಾರಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ