
ಮಹಾಲಿಂಗಪುರ(ಸೆ.09): ತಮಗಿರುವ ಕಾಯಿಲೆಯಿಂದ ಜಿಗುಪ್ಸೆಗೊಂಡು ವೃದ್ಧ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೀರಾಜಿ ಕಲಾಲ (72) ಮತ್ತು ಈತನ ಪತ್ನಿ ಸರಸ್ವತಿ ಕಲಾಲ (65) ತಮ್ಮ ಕೈಗಳಿಗೆ ಹಗ್ಗ ಕಟ್ಟಿಕೊಂಡು ಬಾವಿ ಹಾರಿ ಆತ್ಮಹತ್ಯೆ ಮಾಡಿಕೊಂಡವರು.
ಈ ಕುರಿತ ಪಟ್ಟಣ ಠಾಣೆಯಲ್ಲಿ ಇವರ ಪುತ್ರ ವಿನೋದ ಕಲಾಲ ದೂರು ನೀಡಿದ್ದಾರೆ.
ಕಲಬುರಗಿ: ಕೆಲಸದಿಂದ ತೆಗೆದು ಹಾಕಲು ಯತ್ನ, ಆತ್ಮಹತ್ಯೆಗೆ ದಿವ್ಯಾಂಗ ವ್ಯಕ್ತಿ ಪ್ರಯತ್ನ
ಬುಧವಾರ ರಾತ್ರಿ 10ರಿಂದ 11.30ರ ಸಮಯದಲ್ಲಿ ಮಡ್ಡಿ ಲಕ್ಷ್ಮಿದೇವಿ ಗುಡಿ ಹತ್ತಿರದ ಬಾವಿಯಲ್ಲಿ ತಮ್ಮೆರಡೂ ಕೈಗಳನ್ನು ಕಟ್ಟಿಕೊಂಡು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಮಹಾಲಿಂಗಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ