
ವಿಜಯನಗರ(ಜೂ.03): ಕಣ್ಣು ಕಾಣದ 58 ವರ್ಷದ ವೃದ್ಧೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ವೆಸಗಿದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದೆ. ಲೋಕೇಶ ನಾಯ್ಕ್ ಎಂಬಾತನೇ ವೃದ್ಧೆಯ ಮೇಲೆ ಕಾಮತೃಷೆ ತೀರಿಸಿಕೊಂಡ ಕಾಮುಕನಾಗಿದ್ದಾನೆ.
ಮೇ.30 ರಂದು ಅತ್ಯಾಚಾರವೆಸಗಿ ಆರೋಪಿ ಲೋಕೇಶ ನಾಯ್ಕ್ ಪರಾರಿಯಾಗಿದ್ದ, ಮದುವೆಯಾಗಿ ಮಕ್ಕಳಿದ್ರೂ ತಾಯಿ ವಯಸ್ಸಿನ ಮಹಿಳೆ ಮೇಲೆ ಲೋಕೇಶ ನಾಯ್ಕ್ ಅತ್ಯಾಚಾರ ವೆಸಗಿದ್ದಾನೆ. ಕಾಮುಕನ ಕೃತ್ಯಕ್ಕೆ ಮನನೊಂದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರವೆಸಗಿ ರೋಡಿಗೆ ಎಸೆದ ಅಲ್ಪಸಂಖ್ಯಾತ ಫೇಸ್ಬುಕ್ ಗೆಳೆಯ!
ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದ ಲೋಕೇಶ ನಾಯ್ಕ್ನನ್ನು ಪೊಲೀಸರು ಬಂಧಿಸಿದ್ರೂ ಗ್ರಾಮಸ್ಥರ ಆಕ್ರೋಶ ಮಾತ್ರ ನಿಲ್ಲುತ್ತಿಲ್ಲ. ಕಾಮುಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರ ಜೊತೆ ವಾಗ್ದಾದ ನಡೆಸಿದ್ದಾರೆ.
ಘಟನೆ ಬಳಿಕ ಸಂತ್ರಸ್ಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಊರಿಗೆ ಮರಳಿದ ವೃದ್ಧೆ ವಯಸ್ಸಾದ ತನಗೆ ಹಿಂಗಾಯ್ತಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ