
ಮಂಗಳೂರು (ಜ.28): ಕರಾವಳಿ ತೀರ ಮಂಗಳೂರಿನ ಬಿಜೈ ಕಾಪಿಕಾಡ್ ಖಾಸಗಿ ಫ್ಲಾಟ್ ವೊಂದರ ಕೊಠಡಿಯಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಹಾಗೂ ಅವರ ಪತ್ನಿ (ಹಿರಿಯ ದಂಪತಿ) ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ. ಈ ವೃದ್ಧ ದಂಪತಿ ಸಾವಿಗೆ ಕಾರಣ ಏನೆಂಬುದು ಪತ್ತೆಯಾಗಿಲ್ಲ.
ನಿವೃತ್ತ ಬ್ಯಾಂಕ್ ಮ್ಯಾನೇಜರ್ ದಿನೇಶ್(67) ಮತ್ತು ಪತ್ನಿ ಶೈಲಜಾ(64) ಸಾವನ್ನಪ್ಪಿದ ವೃದ್ಧರಾಗಿದ್ದಾರೆ. ಮಂಗಳೂರು ನಗರ ಬಿಜೈ ಕಾಪಿಕಾಡ್ 4ನೇ ಅಡ್ಡ ರಸ್ತೆಯ ಪೂನಂ ಪಾರ್ಕ್ ಅಪಾರ್ಟ್ಮೆಂಟ್ನ ಎರಡನೇ ಮಹಡಿಯ ಮನೆಯ ಬೆಡ್ ರೂಂನಲ್ಲಿ ಮೃತದೇಹ ಪತ್ತೆಯಾಗಿದೆ. ಕಳೆದ ಆರು ವರ್ಷಗಳಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿಯ ಪತ್ನಿ ಶೈಲಜಾ ಹಾಸಿಗೆ ಹಿಡಿದಿದ್ದರು. ದಂಪತಿ ಪ್ರತಿನಿತ್ಯ ಕಷ್ಟದಿಂದಲೇ ಜೀವನ ಮಾಡುತ್ತಿದ್ದರು.
Raichur: ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಸಾವು: ಹೃದಯಾಘಾತಕ್ಕೆ ಬಲಿ
ಪತಿಯೇ ಪತ್ನಿ ಕೊಲೆ ಮಾಡಿರುವ ಶಂಕೆ: ಇನ್ನು ಅಪಾರ್ಟ್ಮೆಂಟ್ನ ಮಹಡಿಯಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ದಿನೇಶ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಅವರ ಪತ್ನಿ ಶೈಲಜಾ ಮೃತದೇಹ ಹಾಸಿಗೆ ಮೇಲಿದೆ. ಹೀಗಾಗಿ, ದಿನೇಶ್ ಅವರೇ ತಮ್ಮ ಪತ್ನಿ ಶೈಲಜಾ ಅವರನ್ನು ಹತ್ಯೆಗೈದು ನಂತರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ದುರ್ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ