ಆಂಧ್ರದಿಂದ ತುಮಕೂರಿಗೆ ಸಾಗಾಟ ವೇಳೆ ದಾಳಿ: ಒಂದು ಕೋಟಿ ಮೌಲ್ಯದ ರಕ್ತಚಂದನ ವಶ..!

Published : Jul 23, 2024, 09:59 AM ISTUpdated : Jul 23, 2024, 10:18 AM IST
ಆಂಧ್ರದಿಂದ ತುಮಕೂರಿಗೆ ಸಾಗಾಟ ವೇಳೆ ದಾಳಿ: ಒಂದು ಕೋಟಿ ಮೌಲ್ಯದ ರಕ್ತಚಂದನ ವಶ..!

ಸಾರಾಂಶ

ತಪಾಸಣೆಗೆ ಮುಂದಾದಾಗ ಚಾಲಕ ಸೇರಿ ಇಬ್ಬರು ವಾಹನ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ. ಪರಾರಿಯಾಗಿ ಚರಂಡಿಯಲ್ಲಿ ಅವಿತು ಕುಳಿತಿದ್ದ ಚಾಲಕ ಇಬ್ರಾಹಿಂನನ್ನ ಅರಣ್ಯ ಇಲಾಖೆ ಸಿಬ್ನಂದಿ ಬೆನ್ನತ್ತಿ ಹಿಡಿದಿದ್ದಾರೆ. ವಾಹನದಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ಆರಂಭಿಸಲಾಗಿದೆ.   

ತುಮಕೂರು(ಜು.23):  ಆಂಧ್ರದಿಂದ ತುಮಕೂರಿಗೆ ಸಾಗಿಸುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ರೂ. ಮೌಲ್ಯದ ರಕ್ತಚಂದನವನ್ನ ವಶಪಡಿಸಿಕೊಂಡ ಘಟನೆ ತುಮಕೂರಿನ ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾ ಬಳಿ ಇಂದು(ಮಂಗಳವಾರ) ನಡೆದಿದೆ. 

ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾ ಬಳಿ ಅರಣ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡುವ ವೇಳೆ ರಕ್ತಚಂದನ ಪತ್ತೆಯಾಗಿದೆ. ತಪಾಸಣೆಗೆ ಮುಂದಾದ ಇಲಾಖೆ ಸಿಬ್ಬಂದಿ ಕೇಶವಮೂರ್ತಿಯಿಂದ ರಕ್ತ ಚಂದನ ಪತ್ತೆಯಾಗಿದೆ. 
ತಪಾಸಣೆಗೆ ಮುಂದಾದಾಗ ಚಾಲಕ ಸೇರಿ ಇಬ್ಬರು ವಾಹನ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ. ಪರಾರಿಯಾಗಿ ಚರಂಡಿಯಲ್ಲಿ ಅವಿತು ಕುಳಿತಿದ್ದ ಚಾಲಕ ಇಬ್ರಾಹಿಂನನ್ನ ಅರಣ್ಯ ಇಲಾಖೆ ಸಿಬ್ನಂದಿ ಬೆನ್ನತ್ತಿ ಹಿಡಿದಿದ್ದಾರೆ. ವಾಹನದಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ಆರಂಭಿಸಲಾಗಿದೆ. 

ಮಂಗಳೂರು: ಕಸ್ಟಮ್ಸ್ ವಶಕ್ಕೆ ಪಡೆದ ರಕ್ತಚಂದನ 28 ಕೋಟಿಗೆ ಹರಾಜು!

ಸ್ಥಳಕ್ಕೆ ಆಗಮಿಸಿದ ಎಸಿಎಫ್ ಮಹೇಶ್ ಮಾಲಗತ್ತಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಕೆ.ಎ.45 -6234 ವಾಹನದಲ್ಲಿ‌ ರಕ್ತ ಚಂದನದ ತುಂಡುಗಳನ್ನ ಸಾಗಿಸಲಾಗುತಿತ್ತು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!