ಮಂಡ್ಯ: ಮನೆಯಲ್ಲಿದ್ದ ಒಂದು ಕೆಜಿ ಚಿನ್ನ ಕದ್ದು ಖದೀಮರು ಪರಾರಿ..!

Published : Jan 24, 2023, 10:16 AM IST
ಮಂಡ್ಯ: ಮನೆಯಲ್ಲಿದ್ದ ಒಂದು ಕೆಜಿ ಚಿನ್ನ ಕದ್ದು ಖದೀಮರು ಪರಾರಿ..!

ಸಾರಾಂಶ

ಮಂಡ್ಯ‌ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆದ ಘಟನೆ, ಸೋಮನಹಳ್ಳಿಯ ಲೋಲಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. 

ಮಂಡ್ಯ(ಜ.24):  ಮನೆಯಲ್ಲಿದ್ದ ಒಂದು ಕೆಜಿ ಚಿನ್ನ ಕಳ್ಳತನವಾದ ಘಟನೆ ಮಂಡ್ಯ‌ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಿನ್ನೆ(ಸೋಮವಾರ) ಸಂಜೆ ನಡೆದಿದೆ. ಸೋಮನಹಳ್ಳಿಯ ಲೋಲಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. 

ಲೋಲಾಕ್ಷಿ ಅವರು ಸಂಜೆ ವೇಳೆ ಸ್ನೇಹಿತರ ಮನೆಗೆ ತೆರಳಿದ್ದರು. ಈ ವೇಳೆ ಕಳ್ಳರು ಬೀಗ ಒಡೆದು‌ ಮನೆಗೆ ನುಗ್ಗಿ, ಬೀರುವಿನಲ್ಲಿ ಇದ್ದ ಒಡವೆಗಳನ್ನು ತೆಗೆದುಕೊಂಡು‌ ಪರಾರಿಯಾಗಿದ್ದಾರೆ ಅಂತ ತಿಳಿದು ಬಂದಿದೆ. 

Bengaluru: ವಿವಾಹಿತನಿಂದ 2ನೇ ಮದುವೆಗೆ ಒತ್ತಡ: ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಕುತ್ತಿಗೆಗೆ ಇರಿತ

ಲೋಲಾಕ್ಷಿ ಅವರು ಸ್ನೇಹಿತರ ಮನೆಯಿಂದ ವಾಪಸ್‌ ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲೋಲಾಕ್ಷಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ಮನೆಯಲ್ಲಿದ್ದ ಒಂದು ಕೆಜಿ ಚಿನ್ನ ಕಳುವಾಗಿದೆ ಅಂತ ಲೋಲಾಕ್ಷಿ ಮಾಹಿತಿ ನೀಡಿದ್ದಾರೆ. 
ಘಟನಾ ಸ್ಥಳಕ್ಕೆ ಶ್ವಾನ ದಳದಿಂದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಕಳ್ಳತನದಿಂದ‌ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ