
ಬೆಂಗಳೂರು[ಡಿ.14]: ಕೆಎಸ್ಆರ್ಟಿಸಿ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ವಂಚಕರು, ಅಧಿಕಾರಿ ಎಟಿಎಂ ಕಾರ್ಡ್ ಬಳಸಿ 1 ಲಕ್ಷ ಹಣ ದೋಚಿರುವ ಘಟನೆ ನಡೆದಿದೆ.
ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರಿಯ ವಿಭಾಗದ ಕಿರಿಯ ಸಹಾಯಕ ಸುರೇಶ್ ಎಂಬುವರೇ ವಂಚನೆಗೊಳಗಾಗಿದ್ದು, ಎರಡು ದಿನಗಳ ಹಿಂದೆ ಯಲಹಂಕದ ಕೋಗಿಲು ಕ್ರಾಸ್ ಸಮೀಪ ಎಟಿಎಂ ಕಾರ್ಡ್ ಬಳಿಸಿ ದುಷ್ಕರ್ಮಿಗಳು ಹಣ ಪಡೆದಿದ್ದಾರೆ. ಈ ಬಗ್ಗೆ ಬಾಗಲುಗುಂಟೆ ಠಾಣೆಯಲ್ಲಿ ಗುರುವಾರ ಸುರೇಶ್ ದೂರು ದಾಖಲಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶಾಂತಿನಗರದ ಕೆ.ಎಚ್.ರಸ್ತೆಯ ಕಾರ್ಪೋರೇಶನ್ ಬ್ಯಾಂಕ್ನಲ್ಲಿ ಸುರೇಶ್ ಖಾತೆ ಹೊಂದಿದ್ದಾರೆ. ಇದೇ ವರ್ಷದ ಆಗಸ್ಟ್ನಲ್ಲಿ ದಿನವೊಂದಕ್ಕೆ ಒಂದು ಲಕ್ಷ ಹಣವನ್ನು ಡ್ರಾ ಮಾಡುವ ವಿಶೇಷ ಸೌಲಭ್ಯ ಪಡೆದಿದ್ದರು. ಗೃಹ ಸಾಲ ಪಡೆದಿದ್ದ ಅವರು, ತಮ್ಮ ಖಾತೆಯಲ್ಲಿ 5,79,985 ರು. ನಗದು ಹೊಂದಿದ್ದರು.
ಬುಧವಾರ ಸುರೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ದುಷ್ಕರ್ಮಿಗಳು, ಡಿ.11 ರಂದು ಸಂಜೆ 4.54ರಲ್ಲಿ ಕೋಗಿಲು ಕ್ರಾಸ್ನಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಎಟಿಎಂ ಮೂಲಕ ಹಣ ಡ್ರಾ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ