
ದೆಹಲಿ(ಜು.18): ದೆಹಲಿಯಲ್ಲಿ ಕಳೆದ ವರ್ಷ ಮೂರು ಜೈಲುಗಳಿಂದ ಬಿಡುಗಡೆಯಾದ 2,490 ಕೈದಿಗಳು ಮತ್ತೆ ಮರಳಿ ಶರಣಾಗದಿರುವುದು ಪೊಲೀಸ್ ಇಲಾಖೆಗೆ ತಲೆ ನೋವಾಗಿದೆ.
COVID-19 ಕಾರಣದಿಂದಾಗಿ ಈ ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಅವರಲ್ಲಿ ಹಲವರು ಇತರ ರಾಜ್ಯಗಳಿಗೆ ಪಲಾಯನ ಮಾಡಿದ್ದಾರೆ. ಕೆಲವರು ಮತ್ತೆ ಅಪರಾಧಗಳನ್ನು ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಎಂ ವಿರುದ್ಧ ಕೇಸ್ ದಾಖಲಿಸಿದ IAS ಅಧಿಕಾರಿ
ದೆಹಲಿ ಕಾರಾಗೃಹದ ಪ್ರಕಾರ, ಕಳೆದ ವರ್ಷ 6,740 ಕೈದಿಗಳನ್ನು ತುರ್ತು ಪೆರೋಲ್ ಮತ್ತು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸಾಂಕ್ರಾಮಿಕ ಸಮಯದಲ್ಲಿ ಕೋವಿಡ್ ಪ್ರಕರಣಗಳನ್ನು ತಡೆಗಟ್ಟಲು ಕಳೆದ ವರ್ಷ ಬಿಡುಗಡೆಯಾದ ಕನಿಷ್ಠ 2,400 ಕೈದಿಗಳು ಶರಣಾಗಲು ವಿಫಲರಾಗಿದ್ದಾರೆ.
2,490 ಕೈದಿಗಳನ್ನು ಪತ್ತೆಹಚ್ಚಲು ಮತ್ತು ಮತ್ತೆ ಶರಣಾಗುವಂತೆ ಕೇಳಲು ಇಲಾಖೆ ಈಗ ದೆಹಲಿ ಪೊಲೀಸರನ್ನು ಸಂಪರ್ಕಿಸಿದೆ. ದೆಹಲಿ ಕಾರಾಗೃಹಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ ವರ್ಷ ತಿಹಾರ್, ಮಂಡೋಲಿ ಮತ್ತು ರೋಹಿಣಿ ಎಂಬ ಮೂರು ಜೈಲುಗಳಿಂದ ಒಟ್ಟು 6,740 ಕೈದಿಗಳನ್ನು ತುರ್ತು ಪೆರೋಲ್ ಮತ್ತು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ