
ಬೆಂಗಳೂರು(ಅ.26): ಮನೆ ಹೊರ ಆವರಣದಲ್ಲಿ ಬಕೆಟ್ನಲ್ಲಿ ಮಣ್ಣು ತುಂಬಿ ಪೂಜೆ ಸಲುವಾಗಿ ಗಾಂಜಾ ಗಿಡವನ್ನು ಬೆಳೆಸಿದ ತಪ್ಪಿಗೆ ಈಗ ಪೇಯಿಂಟರ್ ವೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.
ಬೈರತಿ ನಿವಾಸಿ ರಾಮ್ ಆಶೀಶ್ ಬಂಧಿತನಾಗಿದ್ದು, ಆರೋಪಿಯಿಂದ 6 ಅಡಿ ಎತ್ತರದ ಗಾಂಜಾ ಗಿಡ ಜಪ್ತಿ ಮಾಡಲಾಗಿದೆ. ಕಾನೂನು ಬಾಹಿರವಾಗಿ ಮನೆಯಲ್ಲಿ ರಾಮ್ ಗಾಂಜಾ ಗಿಡವನ್ನು ಬೆಳೆಸಿರುವ ಮಾಹಿತಿ ಅನ್ವಯ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಹೊರಾವರಣದಲ್ಲಿ ಗಾಂಜಾ ಗಿಡ ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರಕ್ಕೆ ಗಾಂಜಾ ಸಾಗಿಸುತ್ತಿದ್ದವರ ಬಂಧನ: 47 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಉತ್ತರಪ್ರದೇಶ ಮೂಲದ ರಾಮ್, ನಗರದಲ್ಲಿ ಪೇಯಿಂಟರ್ ಆಗಿ ಕೆಲಸ ಮಾಡುತ್ತಿದ್ದ. ಉತ್ತರ ಭಾರತೀಯರು ಗಾಂಜಾ ಗಿಡವನ್ನು ಮನೆಯಲ್ಲಿ ಪೂಜೆ ಸಲುವಾಗಿ ಬೆಳೆಸುತ್ತಾರೆ. ಅಂತೆಯೇ ತಾನು ಸಹ ಪೂಜೆ ಸಲುವಾಗಿ ಗಾಂಜಾ ಬೆಳೆಸಿದ್ದೆ ವಿನಃ ಮಾರಾಟ ಮಾಡುವುದಕ್ಕಲ್ಲ ಎಂದು ವಿಚಾರಣೆ ಆರೋಪಿ ರಾಮ್ ಹೇಳಿಕೆ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ