ಪಾಕಿಸ್ತಾನ ಮಹಿಳೆ ಭಟ್ಕಳದಲ್ಲಿ ಬಂಧನ ಪ್ರಕರಣ; ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ

Published : Nov 06, 2022, 03:41 PM ISTUpdated : Nov 06, 2022, 04:08 PM IST
ಪಾಕಿಸ್ತಾನ ಮಹಿಳೆ ಭಟ್ಕಳದಲ್ಲಿ ಬಂಧನ ಪ್ರಕರಣ; ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ

ಸಾರಾಂಶ

ಪಾಕಿಸ್ತಾನದ ಮಹಿಳೆ ಭಟ್ಕಳದಲ್ಲಿ ಬಂಧನಕ್ಕೊಳಗಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹಿಳೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪಾಸ್‌ಪೋರ್ಟ್ ಹಾಗೂ ಇತರ ಯಾವುದೇ ದಾಖಲೆಗಳನ್ನು ಹೊಂದದೆ ಭಾರತಕ್ಕೆ ನುಸುಳಿದ್ದ ಮಹಿಳೆಯನ್ನು ಬಂಧಿಸಿ ಜೈಲಿಗಟ್ಟಿದ್ದರು.

ಕಾರವಾರ (ನ.6) : ಪಾಕಿಸ್ತಾನದ ಮಹಿಳೆ ಭಟ್ಕಳದಲ್ಲಿ ಬಂಧನಕ್ಕೊಳಗಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹಿಳೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪಾಕಿಸ್ತಾನ ಮೂಲದ ಮಹಿಳೆ ಖತೀಜಾ ಮೆಹರೀನ್ ಪಾಸ್‌ಪೋರ್ಟ್ ಹಾಗೂ ಇತರ ಯಾವುದೇ ದಾಖಲೆಗಳನ್ನು ಹೊಂದದೆ ಭಾರತಕ್ಕೆ ನುಸುಳಿದ್ದಳು. ಗುಪ್ತಚರ ಅಧಿಕಾರಿಗಳು ಮಹಿಳೆಯನ್ನು ಬಂಧಿಸಿ ಜೈಲಿಗಟ್ಟಿದ್ದರು.

ದಾಖಲೆಗಳಿಲ್ಲದೆ ಭಾರತದ ಗಡಿ ನುಸುಳಿದ್ದ ಖತೀಜಾ ಟ್ಕಳದ ದಿ.ಜಾವೇದ್ ರುಕ್ಕುದ್ಧೀನ್ ಎಂಬಾತನನ್ನು ಮದುವೆಯಾಗಿದ್ದಳು. ಹಲವು ವರ್ಷಗಳ ಕಾಲ ಯಾರ ಗಮನಕ್ಕೂ ಬಾರದಂತೆ ವಾಸವಾಗಿದ್ದಳು. ಪಾಕಿಸ್ತಾನ ಮೂಲದ ಖತೀಜಾ ಎಂಬ ಮಹಿಳೆ. ಪಾಸ್‌ಪೋರ್ಟ್ ಹಾಗೂ ಇತರೆ ಯಾವುದೇ ದಾಖಲೆಗಳಿಲ್ಲದೆ ಭಾರತಕ್ಕೆ ನುಸುಳಿದ್ದಾಳೆ ವಿಚಾರ ತಿಳಿಯುತ್ತಿದ್ದಂತೆ ಗುಪ್ತಚರ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದರು. ರಾಜ್ಯ ಪೊಲೀಸರು ಕೂಡ ಈ ಕಾರ್ಯಾಚರಣೆಯಲ್ಲಿದ್ದರು.  ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಪಾಕಿಸ್ತಾನ ಮೂಲದ ಮಹಿಳೆಯನ್ನು ಪತ್ತೆ ಹಚ್ಚಿದ್ದ ಅಧಿಕಾರಿಗಳು.. ಮಹಿಳೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಗುಪ್ತಚರ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಮೂವರು ಮಕ್ಕಳನ್ನು ಹೊಂದಿದ್ದ ಖತೀಜಾ ಹಾಗೂ ದಿ.ಜಾವೇದ್‌ ದಂಪತಿ. ಖತೀಜಾ ಬಂಧನದ ಬಳಿಕ ಒಂಟಿಯಾಗಿದ್ದ ಜಾವೇದ್ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಯಾವುದೇ ದಾಖಲೆಗಳಿಲ್ಲದೆ ಗಡಿ ನುಸುಳಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ. ಮಹಿಳೆ 1 ಲಕ್ಷ ರೂ. ಮೌಲ್ಯದ ಬಾಂಡ್‌ ಸಲ್ಲಿಸಬೇಕು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಬಾರದು, ಪೂರ್ವನುಮತಿ ಇಲ್ಲದೇ ತಾನಿರುವ ಸ್ಥಳದಿಂದ ಬೇರೆಲ್ಲೂ ಹೋಗಬಾರದು ಮುಂತಾದ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದೆ.

6 ವರ್ಷಗಳಿಂದ ಅಕ್ರಮ ವಾಸ ಮಾಡ್ತಿದ್ದಳು ಪಾಕ್‌ ಲೇಡಿ, ತನಿಖೆ ತೀವ್ರಗೊಳಿಸಲು ಸೂಚನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ