SDPI ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ: ಮೂವರ ಬಂಧನ

Kannadaprabha News   | Asianet News
Published : Jan 01, 2021, 03:20 PM IST
SDPI ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ: ಮೂವರ ಬಂಧನ

ಸಾರಾಂಶ

ಎಸ್‌ಡಿಪಿಐ ಬೆಂಬಲಿತರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಸಾಕಷ್ಟು ವೈರಲ್ ಆದ ಬೆನ್ನಲ್ಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಳ್ತಂಗಡಿ(ಜ.01): ಉಜಿರೆಯಲ್ಲಿ ಬುಧವಾರ ಗ್ರಾಪಂ ಚುನಾವಣೆ ವಿಜಯೋತ್ಸವ ವೇಳೆ ದೇಶ ವಿರೋಧಿ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರನ್ನು ಬೆಳ್ತಂಗಡಿ ಪೊಲೀಸರು ಗುರುವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ಎಸ್‌ಡಿಪಿಐ ಬೆಂಬಲಿತರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ವೈರಲ್ ಆಗಿ ಆಕ್ರೋಶಕ್ಕೆ ತುತ್ತಾಗಿದ್ದ ಹಿನ್ನೆಲೆ ಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಿವಾಸಿಗಳಾದ ಮೊಹಮ್ಮದ್ ಹರ್ಷದ್ (22), ದಾವೂದ್ (36) ಹಾಗೂ ಇಸಾಕ್ (28) ಎಂಬುವರನ್ನು ಬಂಧಿಸಿದ್ದಾರೆ. 

ದಕ್ಷಿಣ ಕನ್ನಡ: ಗ್ರಾಪಂ ಫಲಿತಾಂಶದ ವೇಳೆ ಪಾಕ್ ಪರ ಘೋಷಣೆ ಕೂಗಿ SDPI ಕಾರ್ಯಕರ್ತರ ಪುಂಡಾಟ

ಈ ಬೆನ್ನಲ್ಲೇ ವಿಡಿಯೋಗಳನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಅಲ್ಲದೆ, ಘಟಣೆಗೆ ಸಂಬಂಧಿಸಿದಂತೆ ಸಂಗ್ರಹಿಸಲಾದ ಮೊಬೈಲ್ ಮೂಲಕ ಚಿತ್ರೀಕರಿಸಿರುವ ಇತರ ಎರಡು ವಿಡಿಯೋಗಳೂ ಪೊಲೀಸರಿಗೆ ಸಿಕ್ಕಿದ್ದು, ಅವುಗಳನ್ನೂ ವಿಶ್ಲೇಷಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ತನಿಖೆ ಹಾಗೂ ಸಾಕ್ಷ್ಯಗಳ ಅಧಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಎಸ್‌ಡಿಪಿಐ ಒಂದು ಸಂವಿಧಾನ ನಿಯಮದಡಿ ನೋಂದಣಿಯಾದ ರಾಜಕೀಯ ಪಾರ್ಟಿ ಎಂದುಕೊಂಡಿದ್ದೆವು. ಆದರೆ ಅದು ಭಯೋತ್ಪಾದನೆಗೆ ಪೂರಕವಾಗಿ ವರ್ತಿಸುತ್ತಿದೆ. ಅದು ಪಕ್ಷವಾದ್ದರಿಂದ ನಿಷೇಧಿಸುವುದು ಚುನಾವಣಾ ಆಯೋಗ ವ್ಯಾಪ್ತಿಗೆ ಬರುತ್ತದೆ.- ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷರು

ಶತ್ರು ರಾಷ್ಟ್ರ ಪಾಕ್ ಪರ ಘೋಷಣೆ ಕೂಗಿದವರಿಗೆ ಕೆಲವು ರಾಜಕೀಯ ಪಕ್ಷಗಳ ಬೆಂಬಲವಿದೆ. ಅಂತಹ ಪಕ್ಷಗಳು ಇಂದು ಯೋಚನೆ ಮಾಡಬೇಕಾಗಿದೆ. ಹಿಂದಿನ ಸರ್ಕಾರಗಳು ನೀಡಿದ ಬೆಂಬಲದಿಂದ ಇಂದು ಎಸ್ ಡಿಪಿಐಗೆ ಇಷ್ಟೆಲ್ಲಾ ಸೊಕ್ಕು ಬಂದಿದೆ - ಕೆ.ಎಸ್. ಈಶ್ವರಪ್ಪ,   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!