ಗಂಡನ ಮೂಲಕ ಲಂಚಕ್ಕೆ ಬೇಡಿಕೆ: ಲೇಡಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ

Published : Jan 06, 2021, 09:30 PM IST
ಗಂಡನ ಮೂಲಕ ಲಂಚಕ್ಕೆ ಬೇಡಿಕೆ: ಲೇಡಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ

ಸಾರಾಂಶ

20 ಸಾವಿರ ಲಂಚ ಪಡೆಯುತ್ತಿದ್ದ ಲೇಡಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ/ ತನ್ನ ಪತಿಯ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಗ್ರಾಮ ಪಂಚಾಯ್ತಿ  ಅಭಿವೃದ್ಧಿ ಅಧಿಕಾರಿ.

ಧಾರವಾಡ, (ಜ.06): ಜಮೀನು ವಿಚಾರವಾಗಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಶಿವಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಪುಷ್ಪಾ, ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು. ಜಮೀನು ವಿಚಾರಕ್ಕೆ ಸಂಬಂಧಿಸಿ ಸಾಗರ ಹೂಗಾರ ಎಂಬುವವರ ಬಳಿ ಪುಷ್ಪಾ ತನ್ನ ಗಂಡ ಮಹಾಂತೇಶ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಹನಿಟ್ರ್ಯಾಪ್‌ ಮಾಡಿ 50-60 ಮಂದಿಗೆ ವಂಚಿಸಿದ್ದ ಮಾಜಿ ಶಿಕ್ಷಕಿ ಬಲೆಗೆ

ಜಮೀನೊಂದರ ಎನ್‌ಎ ಮಾಡಲು 20 ರೂ. ಸಾವಿರ ಬೇಡಿಕೆ ಇಟ್ಟಿದ್ದರು. ಈ ಹಣವನ್ನು ಪತಿ ಮಹಾಂತೇಶ ಎಂಬುವರ ಮೂಲಕ ಪಡೆಯುತ್ತಿದ್ದಾಗ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರಿದ್ದ ಎಸಿಬಿ ತಂಡ ದಾಳಿ ಮಾಡಿದೆ. ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ