
ಬೆಂಗಳೂರು(ಏ. 20) ಪಾದರಾಯನಪುರ ಪ್ರಕರಣದಲ್ಲಿ ಹಲ್ಲೆ ಆರೋಪಿಯಾಗಿ ಬಂಧನಕ್ಕೆ ಒಳಗಾಗಿರುವ ಫರ್ಜವಾ ಪೊಲೀಸರಿಗೆ ಹೊಸ ತಲೆನೋವಾಗಿದ್ದಾರೆ. ಈಕೆಯನ್ನು ಮಹಿಳೆ ಎಂದು ಹೇಳಲಾಗಿತ್ತು ಆದರೆ ವಿಚಾರಣೆ ವೇಳೆ ತಾನು ಮಂಗಳಮುಖಿ ಅಂಥ ಹೇಳಿದ್ದಾಳೆ.
"
ಅನಿವಾರ್ಯವಾಗಿ ಪೊಲೀಸರು ಫರ್ಜುವಾರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಾರೆ. ಈಕೆಯನ್ನು ಸೇರಿ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸುತ್ತ ಇದ್ದಾರೆ. ಕಬೀರ್, ಇರ್ಷಾದ್ ಅಹ್ಮದ್, ಹರ್ಷದ್ ಹಾಗೂ ಫರ್ಜುವಾ ಪೊಲೀಸ್ ವಿಚಾರಣೆ ನಡೆಯುತ್ತಿದೆ.
ಸುವರ್ಣ ನ್ಯೂಸ್ ಪ್ರಶ್ನೆಗೆ ಉತ್ತರಿಲಾದೆ ಜಮೀರ್ ವಿಲ-ವಿಲ
ಭಾನುವಾರ ರಾತ್ರಿ ಬೆಂಗಳೂರು ಚಾಮರಾಜಪೇಟೆ ಪಾದರಾಯನಪುರದಲ್ಲಿ ದೊಡ್ಡ ಗಲಾಟೆಯೇ ಸಂಭವಿಸಿತ್ತು. ಕ್ವಾರಂಟೈನ್ ಗೆ ಕೊರೋನಾ ಶಂಕಿತರನ್ನು ಕರೆದುಕೊಂಡು ಹೋಗಲು ಬಂದಿದ್ದ ವೈದ್ಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಇದಾದ ಮೇಲೆ ಆರೋಪಿಗಳ ಹೆಡೆಮುರಿ ಕಟ್ಟಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ