ನಾಲಪ್ಪಾಡ್ ಪುತ್ರನ ಬೆಂಬಲಿಗರನ್ನು ಮಕ್ಕಳ ಕಳ್ಳರೆಂದು ಹೆದರಿದ ಜನ

By Kannadaprabha NewsFirst Published Jan 9, 2021, 5:58 AM IST
Highlights

ನಲಪ್ಪಾಡ್‌ ಬೆಂಬಲಿಗರನ್ನು ಮಕ್ಕಳ ಕಳ್ಳರು ಎಂದು ಭಾವಿಸಿ ಗೊಂದಲ | ಮಂಗಳೂರಿನಲ್ಲಿ ಮಗುವಿಗೆ ನಲಪ್ಪಾಡ್‌ ಬೆಂಬಲಿಗರ ಕಾರು ಡಿಕ್ಕಿ | ಮಗುವಿಗೆ ಸಮೀಪ ಹೋದಾಗ ಮಕ್ಕಳ ಕಳ್ಳರೆಂದು ಅಪಪ್ರಚಾರ

ಮಂಗಳೂರು(ಜ.09): ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿರುವ ಬೆಂಗಳೂರಿನ ಶಾಸಕ ಹ್ಯಾರೀಸ್‌ ಪುತ್ರ ಮಹಮ್ಮದ್‌ ನಲಪ್ಪಾಡ್‌ ಬೆಂಬಲಿಗರಿದ್ದ ಕಾರು ಮಗುವೊಂದಕ್ಕೆ ಡಿಕ್ಕಿ ಹೊಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ದೇರಳಕಟ್ಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಇದನ್ನು ತಪ್ಪಾಗಿ ಭಾವಿಸಿದ ಸ್ಥಳೀಯರು ಹೊರಜಿಲ್ಲೆಯಿಂದ ಮಕ್ಕಳ ಕಳ್ಳರು ಆಗಮಿಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬೆಂಗಳೂರಿನಿಂದ ಮಹಮ್ಮದ್‌ ನಲಪ್ಪಾಡ್‌ ಬೆಂಬಲಿಗರಿದ್ದ 12 ಮಂದಿ ತಂಡ, 2 ಕಾರುಗಳಲ್ಲಿ ಮಂಗಳೂರು ಕ್ಷೇತ್ರ ಪ್ರವಾಸ ಕೈಗೊಂಡಿದ್ದರು. ಮುಡಿಪು, ಕೊಣಾಜೆ, ಹರೇಕಳ ಭಾಗಗಳಲ್ಲಿ ಪ್ರವಾಸ ನಡೆಸಿದ ತಂಡ, ಚುನಾವಣಾ ಪ್ರಚಾರ ನಡೆಸಿ ಮಂಗಳೂರಿಗೆ ವಾಪಸಾಗುತ್ತಿದ್ದರು.

ಸಚಿವರಾಗುವ ಕನಸು ಕಂಡವರಿಗೆ ಮತ್ತೊಮ್ಮೆ ಶಾಕ್...!

ಈ ಸಂದರ್ಭ ದೇರಳಕಟ್ಟೆಬಳಿ ರಸ್ತೆ ದಾಟುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿದೆ. ಕೂಡಲೇ ಕಾರಿನಿಂದಿಳಿದ ತಂಡ ಮಗುವಿನತ್ತ ಇಳಿದು ಬರುತ್ತಿದ್ದಂತೆ ಸ್ಥಳೀಯವಾಗಿ ಅವರನ್ನು ಮಕ್ಕಳ ಕಳ್ಳರು ಎಂದು ಅಪಪ್ರಚಾರ ನಡೆಸಿದ್ದಾರೆ.

ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೂ ಸುಳ್ಳು ಸುದ್ದಿ ಹರಿಯಲಾರಂಭಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಹಲವು ಮಂದಿ ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೂಡಲೇ ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು, ಎರಡು ಕಾರುಗಳಲ್ಲಿದ್ದ ತಂಡವನ್ನು ಕೊಣಾಜೆ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ.

click me!