ನೇಣು ಹಾಕೋದನ್ನ ತಪ್ಪಿಸೋದು ಬಿಟ್ಟು ವಿಡಿಯೋ ಮಾಡಿದ ಭೂಪರು: ಮಾನವೀಯತೆ ಮರೆತು ಬಿಟ್ರಾ ಜನ?

Published : Sep 13, 2022, 01:11 PM IST
ನೇಣು ಹಾಕೋದನ್ನ ತಪ್ಪಿಸೋದು ಬಿಟ್ಟು ವಿಡಿಯೋ ಮಾಡಿದ ಭೂಪರು: ಮಾನವೀಯತೆ ಮರೆತು ಬಿಟ್ರಾ ಜನ?

ಸಾರಾಂಶ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದ ಘಟನೆ 

ವಿಜಯನಗರ (ಸೆ.13):  ನೇಣು ಹಾಕುವುದನ್ನು ತಪ್ಪಿಸೋದನ್ನು ಬಿಟ್ಟು ಜನರು ವಿಡಿಯೋ ಮಾಡಿದ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ವಿದ್ಯುತ್ ಕಂಬಕ್ಕೆ ಮಂಜುನಾಥ್(25) ಎಂಬಾತ ಮೊನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. 

ಹನುಮನಹಳ್ಳಿಯ ಫ್ಲೈಓವರ್ ಮೇಲಿನ‌ ವಿದ್ಯುತ್ ಕಂಬಕ್ಕೆ ಮಂಜುನಾಥ್ ನೇಣು ಹಾಕಿಕೊಂಡಿದ್ದನು. ಕುಡಿದು ಹೀಗೆ ಮಾಡಿಕೊಳ್ತಿದ್ದಾನೆ ಎಂದು ಮಾತಾಡಿಕೊಂಡು ಭೂಪರು ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡೋ ಬದಲು ಆತ್ಮಹತ್ಯೆಯನ್ನ ತಪ್ಪಿಸಿದ್ದರೆ ಮಂಜುನಾಥ್‌ ಬದುಕುಳಿಯುತ್ತಿದ್ದ. 

ಜೊತೆಯಾಗಿ ಸಾಯೋಣ ಅಂತಾ ದಂಪತಿ ತೀರ್ಮಾನಿಸಿದ್ರು.. ಅತಿಯಾದ ತೂಕದಿಂದಾಗಿ ಹೆಂಡ್ತಿ ಬಚಾವ್‌ ಆದಳು!

ಈ ವಿಡಿಯೋ ಮರೆಯಾದ ಮಾನವೀಯತೆಗೆ ಕನ್ನಡಿ ಹಿಡಿದಂತಿದೆ. ಆತ್ಮಹತ್ಯೆ ಮಾಡಿಕೊಳ್ಳೋದನ್ನು ತಪ್ಪಿಸಬಹುದಾಗಿತ್ತು, ಆದರೆ, ಇಲ್ಲಿನ ಮಾತ್ರ ವಿಡಿಯೋ ಮಾಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್ ನೇಣಿಗೆ ಶರಣಾಗಿದ್ದಾನೆ ಅಂತ ತಿಳಿದು ಬಂದಿದೆ. ತಾನೇ ಉಟ್ಟಿದ್ದ ಲುಂಗಿಯಿಂದ ನೇಣಿಗೆ ಶರಣಾಗಿದ್ದಾನೆ ಮಂಜುನಾಥ್‌.  
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ