
ಆನೇಕಲ್(ಏ.29): ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭರ್ಜರಿ ಬೇಟೆ ನಡೆಸಿ ಲಾಕ್ಡೌನ್ ಸಮಯದಲ್ಲಿ ಹಣ ಮಾಡುವ ಉದ್ದೇಶದಿಂದ ಕಾರಿನಲ್ಲಿ ತುಂಬಿಕೊಂಡು ಬಂದಿದ್ದ ಅಂದಾಜು 91.30 ಲಕ್ಷ ಮೌಲ್ಯದ 104 ಕೇಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಟೊಯೋಟಾ ಇಟಿಯಾಸ್ ಕಾರು ಹಾಗೂ ಬೆಲೆ ಬಾಳುವ ಮೊಬೈಲ್ ಫೋನನ್ನು ವಶ ಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ನಲ್ಲೂರು ಜಿಲ್ಲೆ, ರಾಂಪುರ್ ತಾಲೂಕು ಗುಂಡೋಲು ಗ್ರಾಮದ ಅಂತಾರಾಜ್ಯದ ಕುಖ್ಯಾತಿಯ ನಾಗೇಂದ್ರ(39)ನನ್ನು ಆಗ್ನೇಯ ಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀನಾಥ ಮಹದೇವ ಜೋಶಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಠಾಣಾ ಉಪ ಭಾಗದ ಸಹಾಯಕ ಪೊಲೀಸ್ ಆಯುಕ್ತ ಎನ್.ಪವನ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಅನಿಲ್ ಕುಮಾರ್ ಮತ್ತು ಸಿಬ್ಬಂದಿ ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ.
ಬೆಂಗಳೂರು: ಟ್ರಕ್ನಲ್ಲಿತ್ತು 1 ಕೋಟಿಯ ಗಾಂಜಾ..!
ಆರೋಪಿ ನಾಗೇಂದ್ರ ಚಿಂತಾಪಲ್ಲಿ ಅರಣ್ಯ ಪ್ರದೇಶದಿಂದ ಕಾರಿನಲ್ಲಿ ಹೊರಟು ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯ ಡಿ.ಮಾರ್ಟ್ ಬಳಿ ಬರುವುದಾಗಿ ಭಾತ್ಮೀದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಆರೋಪಿಯ ಮೇಲೆ ದಾಳಿ ನಡೆಸಿ ಮಾಲು, ಕಾರು ಹಾಗೂ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ