
ಕೊಲ್ಹಾರ(ಜ.22): ರಾಜ್ಯದಲ್ಲಿ ಗೋವು ಹತ್ಯೆ ಕಾನೂನು ಜಾರಿಯಲ್ಲಿದ್ದರೂ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದ ಕಸಾಯಿಖಾನೆಯಲ್ಲಿ ಗುರುವಾರ ಬೆಳಗ್ಗೆ ಗೋವು ಕತ್ತರಿಸಿ ಮಾಂಸ ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೊಲ್ಹಾರದ ಸಂತೆಯಲ್ಲಿ ಬುಧವಾರ ರೈತರೊಬ್ಬರಿಂದ ಕೂಡಗಿ ಗ್ರಾಮದ ಸಿಕಂದರಸಾಬ ರಾಜೇಸಾಬ ಬೇಬಾರಿ ಬಂಧಿತ ಆರೋಪಿ.
ಗೋಹಂತಕರ ಪರ ನಿಂತ ಕಾಂಗ್ರೆಸ್ಗೆ ಗೋಮಾತೆಯ ಶಾಪ: ಕಟೀಲ್
ಈ ವ್ಯಕ್ತಿ ಎರಡು ಗೋವುಗಳನ್ನು ಖರೀದಿಸಿ ಒಂದನ್ನು ಕಡಿದು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಈ ಸಂಬಂಧ ವಿಎಚ್ಪಿಯ ತಮ್ಮಣ್ಣ ಬಡಿಗೇರ ಅವರು ದೂರು ನೀಡಿದ್ದಾರೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ