ವೈದ್ಯನ ವೇಷದಲ್ಲಿ ಬಂದು ಉದ್ಯಮಿಯ ಚಿನ್ನ ಲೂಟಿ

Kannadaprabha News   | Asianet News
Published : Sep 14, 2020, 07:22 AM IST
ವೈದ್ಯನ ವೇಷದಲ್ಲಿ ಬಂದು ಉದ್ಯಮಿಯ ಚಿನ್ನ ಲೂಟಿ

ಸಾರಾಂಶ

ಆಪರೇಷನ್‌ ಥಿಯೇಟರ್‌ ತೋರಿಸೋದಾಗಿ ನಂಬಿಸಿ ಕೃತ್ಯ| ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ತೆಗೆದುಕೊಂಡು ಯುವಕ ಪರಾರಿ| ಈ ಸಂಬಂಧ ಸುರೇಶ್‌ ಎಂಬುವನ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು| 

ಬೆಂಗಳೂರು(ಸೆ.14): ವೈದ್ಯಕೀಯ ಸೋಗಿನಲ್ಲಿ ಬಂದ ಯುವಕನ ಮಾತಿಗೆ ಮರುಳಾದ ಉದ್ಯಮಿಯೊಬ್ಬರು ಮೈಮೇಲಿದ್ದ ಚಿನ್ನಾಭರಣವನ್ನೆಲ್ಲ ಬಿಚ್ಚಿಕೊಟ್ಟು ಮಕ್ಮಲ್‌ ಟೋಪಿ ಹಾಕಿಸಿಕೊಂಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಹಾಸನ ಜಿಲ್ಲೆಯ ಅರಸೀಕೆರೆಯ ಗಂಜಿಗೆರೆ ನಿವಾಸಿಯಾಗಿರುವ ಉದ್ಯಮಿ ಜಿ.ಕೆ.ನಂಜೇಶ್‌ ವಂಚನೆಗೆ ಒಳಗಾದವರು. ಉದ್ಯಮಿ ಕೊಟ್ಟ ದೂರಿನ ಮೇರೆಗೆ ಸುರೇಶ್‌ ಎಂಬುವನ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಿಬ್ಬಂದಿ ನಡುವೆ ವಾಗ್ವಾದ, ಕೈಬೆರಳು ಕಚ್ಚಿ ತುಂಡರಿಸಿದ ಭೂಪ!

ನಂಜೇಶ್‌ ಚಿಕ್ಕಮಗಳೂರಿನಲ್ಲಿ ರಸಗೊಬ್ಬರ ವ್ಯಾಪಾರಿ. ನಗರಕ್ಕೆ ಬಂದಿದ್ದ ಅವರು, ಸೆ.1ರಂದು ಮಧ್ಯಾಹ್ನ 2 ಸುಮಾರಿಗೆ ಊಟಕ್ಕೆಂದು ಆನಂದ್‌ ರಾವ್‌ ಸರ್ಕಲ್‌ ಬಳಿ ಇರುವ ಹೋಟೆಲ್‌ಗೆ ಹೋಗಿದ್ದರು. ಅಪರಿಚಿತ ಯುವಕನೊಬ್ಬ ತಾನು ಬೌರಿಂಗ್‌ ಆಸ್ಪತ್ರೆಯ ವೈದ್ಯ ಸುರೇಶ್‌ ಎಂದು ಪರಿಚಯಿಸಿಕೊಂಡಿದ್ದ. ಇದಾದ ಸ್ವಲ್ಪ ಹೊತ್ತಿನ ಬಳಿಕ ಆಪರೇಷನ್‌ ಥಿಯೇಟರ್‌ ತೋರಿಸುವುದಾಗಿ ಹೇಳಿ, ಉದ್ಯಮಿಯನ್ನು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಪರೇಷನ್‌ ಥಿಯೇಟರ್‌ ಒಳ ಹೋಗಲು ಮೈಮೇಲೆ ಚಿನ್ನಾಭರಣ ಹಾಗೂ ಇತರೆ ವಸ್ತುಗಳಿರಬಾರದು ಎಂದು ಹೇಳಿದ್ದ. ಆತನ ಮಾತನ್ನು ನಂಬಿದ ಉದ್ಯಮಿ, 35 ಗ್ರಾಂ ಚಿನ್ನದ ಸರ, 16 ಗ್ರಾಂ. ಉಂಗುರ, 1.20 ಲಕ್ಷ ನಗದು ಹಾಗೂ ಇತರೆ ದಾಖಲಾತಿಗಳನ್ನು ತಾವು ಉಳಿದುಕೊಂಡಿದ್ದ ಕೊಠಡಿಯಲ್ಲಿನ ಲಾಕರ್‌ನಲ್ಲಿಟ್ಟಿದ್ದರು.

ಹೋಟೆಲ್‌ ಕೊಠಡಿಯ ಕೀಯನ್ನು ವಂಚಕ ತೆಗೆದುಕೊಂಡಿದ್ದ. ಬೌರಿಂಗ್‌ ಆಸ್ಪತ್ರೆಯ ಆಪರೇಷನ್‌ ಥಿಯೇಟರ್‌ ಮುಂದೆ ಕೂರಿಸಿದ್ದ. 7 ಗಂಟೆಯಾದರೂ ಯಾರೊಬ್ಬರು ಕರೆದಿಲ್ಲ. ಹೀಗಾಗಿ, ಸುರೇಶ್‌ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ವಿಚಾರಿಸಿದಾಗ, ಆ ಹೆಸರಿನ ವೈದ್ಯರು ಇಲ್ಲ ಎಂಬುದು ಗೊತ್ತಾಗಿದೆ. ಹೋಟೆಲ್‌ಗೆ ಬಂದು ಕೊಠಡಿಯಲ್ಲಿ ನೋಡಿದಾಗ, ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ತೆಗೆದುಕೊಂಡು ಪರಾರಿಯಾಗಿದ್ದ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!