ಬಣ್ಣದ ಮಾತಿಗೆ ಮರುಳಾದ ಯುವತಿ..! ಪ್ರೀತಿಯ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ

Kannadaprabha News   | Asianet News
Published : Jun 12, 2020, 07:21 AM ISTUpdated : Jun 12, 2020, 08:15 AM IST
ಬಣ್ಣದ ಮಾತಿಗೆ ಮರುಳಾದ ಯುವತಿ..! ಪ್ರೀತಿಯ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ

ಸಾರಾಂಶ

ಮೂಡಲಪಾಳ್ಯದ ಅಕ್ಷಯ್‌ ಕುಮಾರ್‌ ಎಂಬಾತನ ವಿರುದ್ಧ ಆಡುಗೋಡಿ ಪೊಲೀಸರು ಪ್ರಕರಣ ದಾಖಲು| ಸಂತ್ರಸ್ತೆ 2018ರಲ್ಲಿ ತನ್ನ ಸ್ನೇಹಿತರ ಜೊತೆ ಪಾಂಡಿಚೇರಿಗೆ ಪ್ರವಾಸಕ್ಕೆ ಹೋಗಿದ್ದಳು| ಈ ವೇಳೆ ಅಕ್ಷಯ್‌ ಕುಮಾರ್‌, ತಾನು ಬೆಂಗಳೂರಿನವನು ಎಂದು ಯುವತಿಯನ್ನು ಪರಿಚಯಿಸಿಕೊಂಡಿದ್ದ|ಇಬ್ಬರು ಮೊಬೈಲ್‌ ಸಂಖ್ಯೆ ವಿನಿಮಯ ಮಾಡಿಕೊಂಡಿದ್ದರು. ಹೀಗೆ ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು|

ಬೆಂಗಳೂರು(ಜೂ.12): ಪ್ರವಾಸಕ್ಕೆ ತೆರಳಿದ್ದ ವೇಳೆ ಯುವತಿಗೆ ಪರಿಚಯವಾಗಿದ್ದ ಯುವಕನೊಬ್ಬ ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆಡುಗೋಡಿಯ ಬಾಲಪ್ಪ ಲೇಔಟ್‌ ನಿವಾಸಿ 32 ವರ್ಷದ ಯುವತಿ ಕೊಟ್ಟ ದೂರಿನ ಮೇರೆಗೆ, ಮೂಡಲಪಾಳ್ಯದ ಅಕ್ಷಯ್‌ ಕುಮಾರ್‌ ಎಂಬಾತನ ವಿರುದ್ಧ ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ.

ಸಂತ್ರಸ್ತೆ 2018ರಲ್ಲಿ ತನ್ನ ಸ್ನೇಹಿತರ ಜೊತೆ ಪಾಂಡಿಚೇರಿಗೆ ಪ್ರವಾಸಕ್ಕೆ ಹೋಗಿದ್ದಳು. ಈ ವೇಳೆ ಅಕ್ಷಯ್‌ ಕುಮಾರ್‌, ತಾನು ಬೆಂಗಳೂರಿನವನು ಎಂದು ಯುವತಿಯನ್ನು ಪರಿಚಯಿಸಿಕೊಂಡಿದ್ದ. ಬಳಿಕ ಇಬ್ಬರು ಮೊಬೈಲ್‌ ಸಂಖ್ಯೆ ವಿನಿಮಯ ಮಾಡಿಕೊಂಡಿದ್ದರು. ಹೀಗೆ ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು.

ಛಾಯಾಗ್ರಾಹಕನ ವಿರುದ್ಧ ವಂಚನೆ ಕೇಸ್; ಪ್ರೇಮ ಕಹಾನಿಗೆ ಬಿತ್ತು ಬ್ರೇಕ್?

ಆರೋಪಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಸಾಧಿಸಿದ್ದ. ಅಲ್ಲದೆ, ಬ್ಯಾಂಕಿನಲ್ಲಿ ಸಾಲ ಪಡೆದು ಆತನಿಗೆ ಕಾರು ಕೊಡಿಸಿದ್ದಳು. ಹುಟ್ಟುಹಬ್ಬದ ಆಚರಣೆಗೆ ದುಬಾರಿ ಬೆಲೆಯ ಮೊಬೈಲ್‌, ಬಟ್ಟೆ ಉಡುಗೊರೆಯಾಗಿ ಕೊಟ್ಟಿದ್ದಳು. ಹಂತ ಹಂತವಾಗಿ ಹಣ ಪಡೆದಿದ್ದ ಆರೋಪಿ ಮದುವೆಯಾಗದೇ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ