ಬೆಳಗಾವಿ: ಸಾಲಬಾಧೆಯಿಂದಾಗಿ ನೇಕಾರ ಆತ್ಮಹತ್ಯೆ

Kannadaprabha News   | Asianet News
Published : Mar 24, 2021, 12:37 PM IST
ಬೆಳಗಾವಿ: ಸಾಲಬಾಧೆಯಿಂದಾಗಿ ನೇಕಾರ ಆತ್ಮಹತ್ಯೆ

ಸಾರಾಂಶ

ಕೋವಿಡ್‌-​19 ಲಾಕ್‌ಡೌನ್‌ನಲ್ಲಿ ನೇಕಾರಿಕೆ ಕೈ ಕೊಟ್ಟ ಪರಿಣಾಮ ಸಾಲ ಮಾಡಿಕೊಂಡಿದ್ದ ಮೋಹನ್‌| ಸಾಲ ಮರುಕಳಿಸುವಂತೆ ಸಾಲಗಾರರು ಕಾಟ ಹೆಚ್ಚಾಗಿತ್ತು. ಇದರಿಂದ ಮನನೊಂದು ತಮ್ಮ ಮಗ್ಗದ ಮನೆಯಲ್ಲೇ ನೇಣಿಗೆ ಶರಣು| ಈ ಕುರಿತು ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಬೆಳಗಾವಿ(ಮಾ.24): ಸಾಲದ ಬಾಧೆ ತಾಳಲಾರದೆ ನೇಕಾರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಡಗಾವಿಯ ದೇವಾಂಗ ನಗರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ದೇವಾಂಗ ನಗರದ ಮೋಹನ್‌ ಡೊಂಬರ (61) ಆತ್ಮಹತ್ಯೆ ಮಾಡಿಕೊಂಡ ನೇಕಾರ. ಕೋವಿಡ್‌-​19 ಲಾಕ್‌ಡೌನ್‌ನಲ್ಲಿ ನೇಕಾರಿಕೆ ಕೈ ಕೊಟ್ಟ ಪರಿಣಾಮ ಮೋಹನ್‌ ಸಾಲ ಮಾಡಿಕೊಂಡಿದ್ದ. ಸಾಲ ಮರುಕಳಿಸುವಂತೆ ಸಾಲಗಾರರು ಕಾಟ ಹೆಚ್ಚಾಗಿತ್ತು. ಇದರಿಂದ ಮನನೊಂದು ತಮ್ಮ ಮಗ್ಗದ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಾಲಬಾಧೆ: ಕೃಷಿ ಹೊಂಡಕ್ಕೆ ಹಾರಿ ಮೂವರು ಆತ್ಮಹತ್ಯೆ

ಈ ಕುರಿತು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?