ಹಾವೇರಿ: 5 ತಿಂಗಳಿಂದ ಬಾರದ ವೇತನ, ಮನನೊಂದು ವ್ಯಕ್ತಿ ಆತ್ಮಹತ್ಯೆ

Published : Sep 06, 2020, 11:39 AM IST
ಹಾವೇರಿ: 5 ತಿಂಗಳಿಂದ ಬಾರದ ವೇತನ, ಮನನೊಂದು ವ್ಯಕ್ತಿ ಆತ್ಮಹತ್ಯೆ

ಸಾರಾಂಶ

ವೇತನ ಬಾರದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ|  ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ನಡೆದ ಘಟನೆ| ಈ ಸಂಬಂಧ ಬಂಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹಾವೇರಿ(ಸೆ.06): ವೇತನ ಬಾರದಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ.  ತಾಯಪ್ಪ ಭೀಮಪ್ಪ ಮಾದರ (42) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. 

ಮೃತ ತಾಯಪ್ಪ ಭೀಮಪ್ಪ ಮಾದರ ಸುಮಾರು ಹತ್ತು ವರ್ಷಗಳಿಂದ ಖಿಲಾರಿ ತಳಿ ಗೋ ಸಂವರ್ಧನಾ ಕೇಂದ್ರದಲ್ಲಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.  ಕಳೆದ 5 ತಿಂಗಳಿಂದ ವೇತನ ಬಾರದ ಹಿನ್ನೆಲೆಯಲ್ಲಿ ಮನೆ ನಿರ್ವಹಣೆ ಕಷ್ಟವಾಗಿತ್ತು ಎಂದು ಹೇಳಲಾಗುತ್ತಿದೆ. 

ಮೃತ ಹೆಂಡ್ತಿ ತಿಥಿ ಕಾರ್ಯಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಪತಿ ಶವವಾಗಿ ಪತ್ತೆ

ವೇತನ ಬಾರದಿದ್ದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದ್ದರಿಂದ ತಾಯಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಂಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಬ್ಬರು ಮಕ್ಕಳ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದ ಅಪ್ಪನಿಗೇ 25 ಲಕ್ಷ ರೂ. ದಂಡ ಹಾಕಿದ ಹೈಕೋರ್ಟ್​
ಅಯ್ಯಯ್ಯೋ.. ಕೊಡಗಿನಲ್ಲಿ ಆಘಾತಕಾರಿ ಘಟನೆ: ತಾಯಿಯ ಅಕ್ರಮ ಸಂಬಂಧಕ್ಕೆ ಮಗು ಬಲಿ