ಲಾಕ್‌ಡೌನ್‌: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ನೇಕಾರ ಆತ್ಮಹತ್ಯೆ

Kannadaprabha News   | Asianet News
Published : Oct 02, 2020, 03:29 PM IST
ಲಾಕ್‌ಡೌನ್‌: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ನೇಕಾರ ಆತ್ಮಹತ್ಯೆ

ಸಾರಾಂಶ

ಆತ್ಮಹತ್ಯೆಗೆ ಶರಣಾದ ವ್ಯಕ್ತಿ| ಬೆಳಗಾವಿ ತಾಲೂಕಿನ ವಡಗಾವಿಯಲ್ಲಿ ನಡೆದ ಘಟನೆ| ಲಾಕ್‌ಡೌನ್‌ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮೃತನ ಕುಟುಂಬ| ಈ ಸಂಬಂಧ ವಡಗಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಬೆಳಗಾವಿ(ಅ.02): ಕೋವಿಡ್‌​-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನೇಕಾರನೊಬ್ಬ ನೇಣಿಗೆ ಶರಣಾಗಿರುವ ಘಟನೆ ಗುರುವಾರ ಬೆಳಗಿನ ಜಾವ ಬೆಳಗಾವಿ ತಾಲೂಕಿನ ವಡಗಾವಿಯಲ್ಲಿ ನಡೆದಿದೆ. 

ಸಂತೋಷ ಢಗೆ(35) ಆತ್ಮಹತ್ಯೆ ಮಾಡಿಕೊಂಡ ನೇಕಾರ. ಕೊರೋನಾ ಸೋಂಕು ಹರಡುವಿಕೆ ತಡೆಗೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿತ್ತು. 

ಹುಬ್ಬಳ್ಳಿ: ಹಣದಾಸೆ ತೋರಿಸಿ ಕೈಕೊಟ್ಟ ಬಿಜೆಪಿ ಮುಖಂಡ, ಗೃಹಿಣಿ ಆತ್ಮಹತ್ಯೆ

ಇದರಿಂದಾಗಿ ಇವರ ಕುಟುಂಬ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಆರ್ಥಿಕ ಸಂಕಷ್ಟದಿಂದ ಹೊರಬಾರದೇ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ವಡಗಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ