ಕಲ​ಬು​ರ​ಗಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Published : Jun 11, 2023, 10:00 PM IST
ಕಲ​ಬು​ರ​ಗಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಸಾರಾಂಶ

ಜೀವನದಲ್ಲಿ ಜಿಗುಪ್ಸೆಗೊಂಡು ಮಡೆಪ್ಪ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಬ್‌ ಅರ್ಬನ್‌ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ ಮೃತನ ಪತ್ನಿ ಚಂದ್ರಕಲಾ ಬಾಚಗುಂಡ 

ಕಲ​ಬು​ರ​ಗಿ(ಜೂ.11):  ಹುಮನಾಬಾದ ರಸ್ತೆಯ ಸ್ವಾಮಿ ಸಮರ್ಥ ಮಂದಿರದ ಕೆಳಗಿನ ಕೋಣೆಯಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಶಹಾಪುರಗಲ್ಲಿಯ ಮಡೆಪ್ಪ ಬಾಚಗುಂಡ ಆತ್ಮಹತ್ಯೆಗೆ ಶರಣಾದವರು. 

ಪುಣೆಯಲ್ಲಿ ಚಿಕ್ಕ ಖಾನಾವಳಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಮಡೆಪ್ಪ ಅವರು ಸ್ವಾಮಿ ಸಮರ್ಥ ದೇವಸ್ಥಾನದದ ಭಕ್ತರಾಗಿದ್ದರು. ವರ್ಷದಲ್ಲಿ ಎರಡು ಬಾರಿ ದೇವಸ್ಥಾನಕ್ಕೆ ಆಗಮಿಸಿ ಕೆಲಕಾಲ ಇರುತ್ತಿದ್ದರು. ಅದೇ ರೀತಿ ಹತ್ತು ದಿನಗಳ ಹಿಂದೆ ದೇವಸ್ಥಾನಕ್ಕೆ ಆಗಮಿಸಿ ಸೇವೆ ಸಲ್ಲಿಸಿದ್ದರು. 

ಕ್ಷುಲ್ಲಕ ಕಾರಣಕ್ಕೆ ತಾಯಿ ಸೀರೆಯಿಂದಲೇ ನೇಣು ಬಿಗಿದುಕೊಂಡ ಅಕ್ಕ- ತಂಗಿಯರು

ಆದರೆ ದೇವಸ್ಥಾನದ ಕೆಳಗಿನ ಕೋಣೆಯಲ್ಲಿನ ಛತ್ತಿಗೆ ಫ್ಯಾನ್‌ ಕೂಡಿಸುವ ಕೊಂಡಿಗೆ ಮಫ್ಲನಿರ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಮಡೆಪ್ಪ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ ಚಂದ್ರಕಲಾ ಬಾಚಗುಂಡ ಅವರು ಸಬ್‌ ಅರ್ಬನ್‌ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!