ಹುಬ್ಬಳ್ಳಿ: ಹಣಕಾಸಿನ ವಿಷಯಕ್ಕೆ ಗಲಾಟೆ, ಚಾಕು ಇರಿದು ಯುವಕನ ಕೊಲೆ

Kannadaprabha News   | Asianet News
Published : May 17, 2021, 09:07 AM IST
ಹುಬ್ಬಳ್ಳಿ: ಹಣಕಾಸಿನ ವಿಷಯಕ್ಕೆ ಗಲಾಟೆ, ಚಾಕು ಇರಿದು ಯುವಕನ ಕೊಲೆ

ಸಾರಾಂಶ

* ಹಳೇ ಹುಬ್ಬಳ್ಳಿ ಬ್ರಹ್ಮಾನಂದ ಶಾಲೆ ಬಳಿ ನಡೆದ ಘಟನೆ  * ಈ ಸಂಬಂಧ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು * ಮುಸ್ತಾಕ್‌ ಅಲಿ ಅತ್ತಾರ ಎಂಬಾತನೇ ಕೊಲೆಯಾದ ವ್ಯಕ್ತಿ  

ಹುಬ್ಬಳ್ಳಿ(ಮೇ.17): ಹಣಕಾಸಿನ ವಿಷಯಕ್ಕಾಗಿ ನಡೆದ ಗಲಾಟೆಯಲ್ಲಿ ನಗರದ ನೂರಾನಿ ಪ್ಲಾಟ್‌ ಮುಸ್ತಾಕ್‌ ಅಲಿ ಅತ್ತಾರ (23) ಎಂಬಾತನಿಗೆ ಆತನ ಸ್ನೇಹಿತರೆ ಚಾಕು ಇರಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ಹಳೇ ಹುಬ್ಬಳ್ಳಿ ಬ್ರಹ್ಮಾನಂದ ಶಾಲೆ ಬಳಿ ನಡೆದಿದೆ. 

ಹಳೇ ಹುಬ್ಬಳ್ಳಿಯ ಮಲ್ಲಿಕ ಮತ್ತು ಅವನ ಸ್ನೇಹಿತ ಚಾಕು ಇರಿದ ಆರೋಪಿಗಳು. ಮುಸ್ತಾಕ್‌ಅಲಿ ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಇಬ್ಬರು, ಬೆನ್ನಿಗೆ ಚಾಕು ಇರಿದಿದ್ದಾರೆ. 

ಅನ್ಯ ಜಾತಿ ಪ್ರೇಮ : ಕುಟುಂಬದವರಿಂದಲೇ ಹತ್ಯೆಯಾದಳಾ ಯುವತಿ..?

ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ, ಸ್ಪಂದಿಸದೆ ಮೃತಪಟ್ಟಿದ್ದಾರೆ. ಮುಸ್ತಾಕ್‌ಅಲಿ ಅವರ ತಂದೆ ಜಮೋಲ್ಸಾಬ್‌ ಅತ್ತಾರ ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!