ಕಲಘಟಗಿ: ಆಸ್ತಿ ವಿಚಾರಕ್ಕೆ ಅಣ್ಣನನ್ನೇ ಕೊಲೆಗೈದ ತಮ್ಮ

Published : Apr 26, 2021, 02:19 PM IST
ಕಲಘಟಗಿ: ಆಸ್ತಿ ವಿಚಾರಕ್ಕೆ ಅಣ್ಣನನ್ನೇ ಕೊಲೆಗೈದ ತಮ್ಮ

ಸಾರಾಂಶ

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದ ಘಟನೆ| ಅಣ್ಣನನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ತಮ್ಮ| ಜಮೀನು ವಿಚಾರವಾಗಿ ನಡೆದ ಕೊಲೆ| ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸರು| ಈ ಸಂಬಂಧ ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಕಲಘಟಗಿ(ಏ.26): ಆಸ್ತಿ ವಿಚಾರವಾಗಿ ಒಡಹುಟ್ಟಿದ ಸಹೋದರನನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ. ಜಮ್ಮಿಹಾಳ ನಿವಾಸಿ ಮೈಲಾರಿ ತಿರ್ಲಾಪುರ(39) ಮೃತ ದುರ್ದೈವಿ.

ಮೈಲಾರಿಯ ಚಿಕ್ಕಪ್ಪನ ಮಗ ರವಿ ತಿರ್ಲಾಪುರ ಎಂಬವನೇ ಆಸ್ತಿ ವಿಚಾರವಾಗಿ ಅಣ್ಣನನ್ನು ಕೊಲೆ ಮಾಡಿದ ಆರೋಪಿ. ಆತನನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೈಲಾರಿಯನ್ನು ಶುಕ್ರವಾರ ರಾತ್ರಿ ಕಿಮ್ಸ್‌ ಆಸ್ಪತ್ರೆಗೆ ತರಲಾಗಿತ್ತು. ಕುತ್ತಿಗೆ, ಬೆನ್ನಿನ ಭಾಗಕ್ಕೆ ಮಾರಣಾಂತಿಕ ಪೆಟ್ಟು ಬಿದ್ದಿರುವ ಹಿನ್ನೆಲೆ ಚಿಕಿತ್ಸೆ ಫಲಿಸದೇ ಮೈಲಾರಿ ಕೊನೆಯುಸಿರೆಳೆದಿದ್ದಾನೆ. 

ದಾವಣಗೆರೆ; ಸುಪನಾತಿ ಸೊಸೆ ಸರಸದ ಕಳ್ಳಾಟ, ಮಾವನಿಗೆ ಸುಪಾರಿ!

ಕಲಘಟಗಿ ಜಮ್ಮಿಹಾಳದಲ್ಲಿನ ಒಂದು ಎಕರೆ ಜಮೀನು ವಿಚಾರವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ರವಿಯ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!