ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಕಲ್ಲು ಎತ್ಹಾಕಿ ಪತ್ನಿ ಕೊಲೆ

Suvarna News   | Asianet News
Published : Dec 11, 2019, 02:54 PM ISTUpdated : Dec 11, 2019, 02:56 PM IST
ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಕಲ್ಲು ಎತ್ಹಾಕಿ ಪತ್ನಿ ಕೊಲೆ

ಸಾರಾಂಶ

ಕುಡಿದ ಮತ್ತಿನಲ್ಲಿ ಪತಿ, ಪತ್ನಿ ಮಧ್ಯೆ ಜಗಳ| ಪತ್ನಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತಿ| ಬಾಗಲಕೋಟೆ ನವನಗರದ ವಾಂಬೆ ಕಾಲೋನಿಯಲ್ಲಿ ನಡೆದ ಘಟನೆ| ಕೊಲೆ ಮಾಡಿದ ಬಳಿಕ ಪರಾರಿಯಾದ ಆರೋಪಿ| 

ಬಾಗಲಕೋಟೆ(ಡಿ.11): ಕುಡಿದ ಮತ್ತಿನಲ್ಲಿ ಪತಿ ಜಗಳವಾಡಿ ಪತ್ನಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾದ ಘಟನೆ ಬಾಗಲಕೋಟೆ ನವನಗರದ ವಾಂಬೆ ಕಾಲೋನಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಕೊಲೆಯಾದವರನ್ನು ರಮೀಜಾ ಬಾಂಧಾರ (35) ಎಂದು ಗುರುತಿಸಲಾಗಿದೆ. ಲಾಲಸಾಬ ಬಾಂಧಾರ(40) ಕೊಲೆ ಮಾಡಿದ ಪತಿ. ಪತಿ ಕುಡಿದು ಬಂದು ಅದೇ ಮತ್ತಿನಲ್ಲಿ ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿದೆ. ನಂತರ ಪತ್ನಿ ಮಲಗಿದ್ದಾಗ ಪತಿ ಲಾಲಸಾಬ ರಮೀಜಾ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಘಟನೆ ಬೆಳಕಿಗೆ ಬಂದ ತಕ್ಷಣ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಕೊಲೆ ಮಾಡಿ ಪರಾರಿಯಾದ ಪತಿ ಲಾಲಸಾಬ ಶೋಧನೆಗೆ ಮುಂದಾಗಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೇಲ್ನೋಟಕ್ಕೆ ಗಂಡ ಹೆಂಡರ ಜಗಳವೆಂದು ಹೇಳಲಾಗುತ್ತಿದ್ದರು ಕೊಲೆಗೀಡಾದ ಪತ್ನಿ ರಮೀಜಾ ಕುಟುಂಬದವರು ಬೇರೆ ಆರೋಪ ಮಾಡುತ್ತಿದ್ದಾರೆ. ತನಿಖೆಯ ನಂತರವೇ ಸತ್ಯ ಹೊರಬೀಳಲಿದೆ. ಈ ಸಂಬಂಧ ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದಂಪತಿಗೆ ನಾಲ್ವರು ಪುತ್ರಿಯರು ಇದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ