ಹುಬ್ಬಳ್ಳಿ: ನಡುರಸ್ತೆಯಲ್ಲೇ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ

By Kannadaprabha NewsFirst Published Jul 29, 2020, 10:10 AM IST
Highlights

ಜನನಿಬಿಡ ಪ್ರದೇಶದಲ್ಲಿ ನಾಲ್ಕೈದು ಯುವಕರ ಗುಂಪು ಬೈಕ್‌ನಲ್ಲಿ ಬಂದು ಅಟ್ಟಾಡಿಸಿ ಚಾಕುವಿನಿಂದ ಇರಿದು ಹತ್ಯೆ| ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| ಹಳೇ ವೈಷಮ್ಯ ಅಥವಾ ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿರಬಹುದೆಂಬ ಶಂಕೆ| ಈ ಸಂಬಂಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲು|

ಹುಬ್ಬಳ್ಳಿ(ಜು.29): ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ದೇಶಪಾಂಡೆ ನಗರದ ಪಕ್ಕದ ಕೃಷ್ಣ ನಗರದಲ್ಲಿ ನಡೆದಿದೆ.

ಲೋಕೇಶ ಕಡೆಮನಿ (18) ಎಂಬಾತನೇ ಕೊಲೆಯಾದ ಯುವಕ. ರಾಜ್‌ ನಗರ ನಿವಾಸಿಯಾದ ಈತನನ್ನು ಜನನಿಬಿಡ ಪ್ರದೇಶದಲ್ಲಿ ನಾಲ್ಕೈದು ಯುವಕರ ಗುಂಪು ಬೈಕ್‌ನಲ್ಲಿ ಬಂದು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಎಣ್ಣೆ ಪಾರ್ಟಿ ವೇಳೆ ಜಗಳ: ಯುವಕನ ಬರ್ಬರ ಕೊಲೆ

ಮೃತ ಯುವಕ ಇತ್ತೀಚಿಗೆ ಸ್ಯಾನಿಟೈಸರ್‌ ಮಾರಾಟ ಮಾಡುತ್ತಿದ್ದ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹಳೇ ವೈಷಮ್ಯ ಅಥವಾ ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧಿಸಿದಂತೆ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
 

click me!